2
ಕೊಪ್ಪಳ : ಟಣಕನಕಲ್ಲ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟದಿಂದ ಓಜಿನಹಳ್ಳಿ ಗ್ರಾಮ ಪಂಚಾಯತ್ ಆದಯ್ಯ ಸ್ವಾಮಿ ಹಾಗೂ ಅಧ್ಯಕ್ಷ ಹುಚ್ಚಪ್ಪ ಯಮನಪ್ಪ ಭೋವಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕೊಪ್ಪಳ ತಾಲೂಕಿನ ಓಜಿನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಣಕನಕಲ್ಲ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಮಹಿಳೆಯರಿಗೆ ಯಾವುದೇ ಸಾರ್ವಜನಿಕ ಶೌಚಾಲಯ ಇರುವುದಿಲ್ಲ.ಇದರಿಂದ ಮಹಿಳೆಯರಿಗೆ ಬಹಿರ್ದೆಸೆಗೆ ಹೋಗಲು ತುಂಬಾ ತೊಂದರೆ ಆಗುತ್ತಿದೆ.ಕೂಡಲೇ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿ ಕೊಡಬೇಕು.ಅಲ್ಲದೆ ಸಾರ್ವಜನಿಕ ಕುಡಿಯುವ ನೀರಿನ ನಳ ಇರುವುದಿಲ್ಲ. ಕೊಡಲೇ ಅಧಿಕಾರಿಗಳು ಕುಡಿಯುವ ನೀರಿಗಾಗಿ ಸಾರ್ವಜನಿಕ ಸ್ಥಳದಲ್ಲಿ ನಳದ ವ್ಯವಸ್ಥೆಯನ್ನು ಮಾಡಿಕೊಡಬೇಕು.ಅಲ್ಲದೆ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪ್ರೌಢಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಯಲ್ಲಿ ಯಾವುದೇ ದಲಿತ ಮಹಿಳೆಯರು ಇರುವುದಿಲ್ಲ. ಕೂಡಲೇ ಅಡಿಗೆ ಮಾಡುವ ಸಿಬ್ಬಂದಿಯಲ್ಲಿ ದಲಿತ ಮಹಿಳೆಯರನ್ನು ಆಯ್ಕೆ ಮಾಡಿಕೊಂಡು ಸಾಮಾಜಿಕ ಸಮಾನತೆ ಸಾಧಿಸಬೇಕು.ಮುಂತಾದ ನಮ್ಮ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟದ ತಾಲೂಕಾ ಸಂಯೋಜಕ ಸುಂಕಪ್ಪ ಮೀಸಿ. ಟಣಕನಕಲ್ಲ ಗ್ರಾಮಸ್ಥರಾದ ಯಮನೂರಪ್ಪ ಕುಂಜಾಲಿ.ಮಾರುತಿ ಕುಂಜಾಲಿ.ಹನುಮವ್ವ ಕುಂಜಾಲಿ.ಯಮನವ್ವ ಕುಂಜಾಲಿ.ಹನುಮಪ್ಪ ಕುಂಜಾಲಿ.ಪರಶುರಾಮ್ ಕುಂಜಾಲಿ.ದುರಗವ್ವ ಕುಂಜಾಲಿ.ಈರವ್ವ ಕುಂಜಾಲಿ.ಸುರೇಶ ಕುಂಜಾಲಿ.ಗಾಳೆವ್ವ ಕುಂಜಾಲಿ ಮುಂತಾದವರು ಮನವಿ ಸಲ್ಲಿಸುವಾಗ ಉಪಸ್ಥರಿದ್ದರು.
