Home ರಾಷ್ಟ್ರೀಯ ಸುದ್ದಿ ತಿಪ್ಪನಹಳ್ಳಿಯಲ್ಲಿ ರೈತರ ಆಕ್ರೋಶ: ಬೆಳೆ ನಾಶ, ರೈತನ ಆತ್ಮಹತ್ಯೆ ಯತ್ನ; ಪರಿಹಾರಕ್ಕೆ ಆಗ್ರಹಿಸಿ ಘೇರಾವ್

ತಿಪ್ಪನಹಳ್ಳಿಯಲ್ಲಿ ರೈತರ ಆಕ್ರೋಶ: ಬೆಳೆ ನಾಶ, ರೈತನ ಆತ್ಮಹತ್ಯೆ ಯತ್ನ; ಪರಿಹಾರಕ್ಕೆ ಆಗ್ರಹಿಸಿ ಘೇರಾವ್

by Laxmikanth Nayak
0 comments

ಶಹಪುರ್ ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಹೊಲಕ್ಕೆ ನೀರು ನುಗ್ಗಿ ಬೆಳೆ ನಾಶವಾದ ಘಟನೆ ನಡೆದಿದೆ. ಇದರಿಂದ ನೊಂದ ರೈತ ವಿಷ ಕುಡಿಯಲು ಯತ್ನಿಸಿದ್ದು, ಸಂಬಂಧಿಕರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.


ಗ್ರಾಮದ ಸರ್ವೇ ನಂಬರ್ 67/1 ರಲ್ಲಿ ಜೈನುಲ್ ಅಬದ್ದೀನ್ ದಾದುಲ್ ಎಂಬ ರೈತರಿಗೆ ಸೇರಿದ ಹೊಲದಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣವಾಗಿ ಹಾಳಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ರೈಲ್ವೆ ಕಾಮಗಾರಿಯಿಂದ ಈ ಸ್ಥಿತಿ ಉಂಟಾಗಿದೆ ಎಂದು ರೈತರು ಆರೋಪಿಸಿದ್ದಾರೆ.


ಬೆಳೆ ಕಳೆದುಕೊಂಡು ದಿಕ್ಕುತೋಚದಂತಾದ ರೈತ ಜೈನುಲ್ ಅಬದ್ದೀನ್ ವಿಷ ಸೇವಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಅವರ ಸಂಬಂಧಿಕರು ತಕ್ಷಣ ಧಾವಿಸಿ ವಿಷದ ಬಾಟಲಿಯನ್ನು ಕಸಿದು ಅಪಾಯ ತಪ್ಪಿಸಿದ್ದಾರೆ.


ಘಟನೆಯ ನಂತರ, ರೈಲ್ವೆ ಇಲಾಖೆಯ ಸೈಟ್ ಇಂಜಿನಿಯರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಾದ ಆರ್.ಐ. (ಕಂದಾಯ ನಿರೀಕ್ಷಕರು) ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

banner


ಅಧಿಕಾರಿಗಳ ಭೇಟಿಯ ವೇಳೆ, ಆಕ್ರೋಶಗೊಂಡ ರೈತರು ಅವರನ್ನು ಸುತ್ತುವರೆದು ಘೇರಾವ್ ಹಾಕಿದರು. ಸೂಕ್ತ ಪರಿಹಾರ ನೀಡುವವರೆಗೂ ಯಾವುದೇ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ