Home ಅಪರಾಧ ಸುದ್ದಿ ರಾಯಚೂರು: ಅಬಕಾರಿ ಇಲಾಖೆ ದಾಳಿ, 110 ಲೀಟರ್ ಬೆಲ್ಲದ ಕೊಳೆ ನಾಶ

ರಾಯಚೂರು: ಅಬಕಾರಿ ಇಲಾಖೆ ದಾಳಿ, 110 ಲೀಟರ್ ಬೆಲ್ಲದ ಕೊಳೆ ನಾಶ

by Laxmikanth Nayak
0 comments

ರಾಯಚೂರು: ಅಬಕಾರಿ ಇಲಾಖೆ ದಾಳಿ, 110 ಲೀಟರ್ ಬೆಲ್ಲದ ಕೊಳೆ ನಾಶ


ರಾಯಚೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಇಂದು (ಸೆಪ್ಟೆಂಬರ್ 18, 2025) ರಾಯಚೂರು ಉಪ ವಿಭಾಗದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 110 ಲೀಟರ್ ಬೆಲ್ಲದ ಕೊಳೆಯನ್ನು ಪತ್ತೆ ಹಚ್ಚಿ ನಾಶಪಡಿಸಿದ್ದಾರೆ.
ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ), ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು, ಕಲ್ಬುರ್ಗಿ ವಿಭಾಗ, ಮತ್ತು ಅಬಕಾರಿ ಉಪ ಆಯುಕ್ತರು, ರಾಯಚೂರು ಜಿಲ್ಲೆ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆಸಲಾಯಿತು. ಅಬಕಾರಿ ಉಪ ಅಧೀಕ್ಷಕರು, ರಾಯಚೂರು ಉಪ ವಿಭಾಗ, ಕಚೇರಿಯ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಹಯೋಗದೊಂದಿಗೆ ಈ ಕಾರ್ಯಾಚರಣೆ ಯಶಸ್ವಿಯಾಗಿದೆ.


ಭೂಪೂರ್ ಮತ್ತು ಖೈರವಾಡಗಿ ತಾಂಡಾದಲ್ಲಿ ದಾಳಿ
ಮಾರ್ಗ ಸಂಖ್ಯೆ 3 ಮತ್ತು 4ರ ವ್ಯಾಪ್ತಿಯ ಭೂಪೂರ್ ತಾಂಡಾ ಮತ್ತು ಖೈರವಾಡಗಿ ತಾಂಡಾ ಪ್ರದೇಶಗಳಲ್ಲಿ ದಾಳಿ ನಡೆಸಿದಾಗ, ತಾಂಡಾಗಳ ಹೊರವಲಯದಲ್ಲಿ ಈ ಬೆಲ್ಲದ ಕೊಳೆ ಪತ್ತೆಯಾಯಿತು. ಅದನ್ನು ಸ್ಥಳದಲ್ಲೇ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಹಳೆಯ ಆರೋಪಿಗಳನ್ನು ಸಹ ವಿಚಾರಣೆಗೊಳಪಡಿಸಲಾಯಿತು.
ಸನ್ನದುಗಳ ಪರಿಶೀಲನೆ ಮತ್ತು ಸೂಚನೆ
ಅದೇ ದಿನ, ನಾಗರಹಾಳ ಮತ್ತು ರೊಡಲಬಂಡಾ ಗ್ರಾಮಗಳಲ್ಲಿ ಮದ್ಯದ ಸನ್ನದುಗಳ ತಪಾಸಣೆ ಕೂಡ ನಡೆಯಿತು. ಈ ವೇಳೆ, ಅಧಿಕಾರಿಗಳು ನಿಗದಿಪಡಿಸಿದ ಮದ್ಯದ ಮಾರಾಟದ ಗುರಿಯನ್ನು ತಲುಪಲು ಕಾನೂನು ಕ್ರಮಗಳನ್ನು ಮುಂದುವರಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಅಬಕಾರಿ ಇಲಾಖೆಯು ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಗಳನ್ನು ಮುಂದುವರಿಸಲಿದೆ ಎಂದು ತಿಳಿಸಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?