Home ರಾಷ್ಟ್ರೀಯ ಸುದ್ದಿ ಹುರಸಗುಂಡಗಿಯಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆರೋಪ: 2 ನೀರಿನ ಪ್ಲಾಂಟ್ ದುರಸ್ತಿ ಹೆಸರಿನಲ್ಲಿ 3.3 ಲಕ್ಷ ರೂ. ಗೋಲ್ಮಾಲ್?

ಹುರಸಗುಂಡಗಿಯಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆರೋಪ: 2 ನೀರಿನ ಪ್ಲಾಂಟ್ ದುರಸ್ತಿ ಹೆಸರಿನಲ್ಲಿ 3.3 ಲಕ್ಷ ರೂ. ಗೋಲ್ಮಾಲ್?

by Laxmikanth Nayak
0 comments

ಹುರಸಗುಂಡಗಿಯಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆರೋಪ: 2 ನೀರಿನ ಪ್ಲಾಂಟ್ ದುರಸ್ತಿ ಹೆಸರಿನಲ್ಲಿ 3.3 ಲಕ್ಷ ರೂ. ಗೋಲ್ಮಾಲ್?

ಶಹಾಪುರ: ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಎರಡು ನೀರಿನ ಪ್ಲಾಂಟ್‌ಗಳ ದುರಸ್ತಿ ಕಾಮಗಾರಿ ಹೆಸರಿನಲ್ಲಿ 3.33 ಲಕ್ಷ ರೂಪಾಯಿಗಳ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ತಾಲೂಕಾ ಸಮಿತಿ ಅಧ್ಯಕ್ಷ ಪ್ರದೀಪ ಅಣಬಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ದೂರಿನ ಪ್ರಕಾರ, ಹುರಸಗುಂಡಗಿ ಗ್ರಾಮದ ನೀರಿನ ಪ್ಲಾಂಟ್ ದುರಸ್ತಿಗಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಆದರೆ, ಪಂಚಾಯತ್ ಅಧಿಕಾರಿಗಳು ಯಾವುದೇ ಕೆಲಸ ಮಾಡದೇ, ಕೇವಲ ಕಾಗದದಲ್ಲಿ “ಶ್ರೀಶೈಲ ಏಜೆನ್ಸಿ” ಹೆಸರಿನಲ್ಲಿ ಏಳು ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರಾಮದಲ್ಲಿ ಎರಡು ನೀರಿನ ಪ್ಲಾಂಟ್‌ಗಳಿದ್ದು, ಎರಡರ ದುರಸ್ತಿ ಕಾಮಗಾರಿ ಮಾಡಲಾಗಿದೆ ಎಂದು ನಕಲಿ ದಾಖಲೆ ಸೃಷ್ಟಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಇನ್ನೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

banner

ಇಂತಹ ಅಕ್ರಮ ಹಾಗೂ ಹಣ ದುರ್ಬಳಕೆ ಸಾರ್ವಜನಿಕ ಹಿತಕ್ಕೆ ವಿರುದ್ಧವಾಗಿದ್ದು, ಈ ಬಗ್ಗೆ ತಕ್ಷಣ ತನಿಖೆ ನಡೆಸಿ ಪಿಡಿಓ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು ಹಾಗೂ ದುರುಪಯೋಗಗೊಂಡ ಹಣವನ್ನು ಮರಳಿ ಸರ್ಕಾರಕ್ಕೆ ಸಂದಾಯ ಮಾಡಿಸಬೇಕು ಎಂದು ಪ್ರದೀಪ ಅಣಬಿ ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ. ಈ ದೂರಿನ ಪ್ರತಿಯನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೂ ಕಳುಹಿಸಲಾಗಿದೆ.

ಈ ಸಂಬಂಧ ತಾಲೂಕು ಪಂಚಾಯತ್ ಅಧಿಕಾರಿಗಳು ತನಿಖೆ ಕೈಗೊಂಡ ಬಳಿಕವೇ ಸತ್ಯಾಂಶ ಹೊರಬೀಳಬೇಕಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ