Home ರಾಷ್ಟ್ರೀಯ ಸುದ್ದಿ ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

by Laxmikanth Nayak
0 comments

ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

ಜನ ಆಕ್ರೋಶ ಸುದ್ದಿಜಾಲ

ಶಹಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿ ಸಾರ್ವಜಕರು, ವಿದ್ಯಾರ್ಥಿಗಳು, ಮಕ್ಕಳು ಓಡಾಡಲು ಭಯ ಪಡುವಂತಾಗಿದೆ. ನಾಯಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳಿಯರು ಅನೇಕ ಬಾರಿ ಮೌಖಿಕವಾಗಿ ಗ್ರಾಮ ಪಂಚಾಯಿತಿಗೆ ತಿಳಿಸಿದರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಪತ್ರಿಕೆ ಹೇಳಿಕೆ ಮೂಲಕ ಆರೋಪ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು

ಗ್ರಾಮದ ಮುಖ್ಯರಸ್ತೆ, ಬಸ ನಿಲ್ದಾಣ,ನೇಕಾರ ಕಾಲನಿ, ಬನಶಂಕರಿ ರಸ್ತೆ,ಬಸವೇಶ್ವರ ನಗರ,
ಯಾದವ ನಗರ, ರಾಮನದೊಡ್ಡಿ, ಸಗರ ಕಾಲೊನಿ, ಟಿಪ್ಪು ಸುಲ್ತಾನ ನಗರ,ಗ್ರಾಮದ ಅಗಸಿ,ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರ ಸೇರಿ ವಿವಿಧ ಸ್ಥಳಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಎಲ್ಲೆಂದರಲ್ಲಿ ಓಡಾಡುತ್ತಿವೆ ಮತ್ತು ರಸ್ತೆಯಲ್ಲಿ ನಡೆದು ಹೋಗುವ ಸಾರ್ವಜನಿಕರು, ಮಕ್ಕಳ ಮೇಲೂ ಎರಗುತ್ತಿವೆ. ಅಲ್ಲದೆ, ರಸ್ತೆಯಲ್ಲಿ ಬೈಕಿಗೆ ಅಡ್ಡ ಬರುತ್ತಿರುವುದರಿಂದ ಬೈಕ್ ಸವಾರರು ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ.

banner

ಗ್ರಾಮ ಪಂಚಾಯಿತಿಯವರು ಇದರ ಕಡೆ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ ಕೂಡಲೇ ಗ್ರಾ,ಪಂ,ನವರು ನಾಯಿಗಳನ್ನು ಹಿಡಿದು ದೂರ ಪ್ರದೇಶದಲ್ಲಿ ಬಿಟ್ಟು ಬರಬೇಕು ಎಂದು ಗ್ರಾಮದ ನಾಗರಿಕರು ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ಯಾವುದಾದರೂ ಅನಾಹುತ ಆಗದ ರೀತಿಯಲ್ಲಿ ಕೂಡಲೇ ಬೀದಿನಾಯಿಗಳನ್ನು ಹಿಡಿದು ಬೇರೆ ದೂರದ ಪ್ರದೇಶಕ್ಕೆ ಬಿಟ್ಟು ಬರಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?