Home ರಾಜಕೀಯ ನಿರಾಶ್ರಿತರ ಆಶ್ರಯ ಕೇಂದ್ರ ಬಹಳ ಅನುಕೂಲ: ತಿಪ್ಪಮ್ಮ ಬಿರಾದಾರ

ನಿರಾಶ್ರಿತರ ಆಶ್ರಯ ಕೇಂದ್ರ ಬಹಳ ಅನುಕೂಲ: ತಿಪ್ಪಮ್ಮ ಬಿರಾದಾರ

by Laxmikanth Nayak
0 comments

ನಿರಾಶ್ರಿತರ ಆಶ್ರಯ ಕೇಂದ್ರ ಬಹಳ ಅನುಕೂಲ: ತಿಪ್ಪಮ್ಮ ಬಿರಾದಾರ

ವಿಶ್ವ ವಸತಿ ರಹಿತರ ದಿನಾಚರಣೆ ಅಂಗವಾಗಿ ಸುರಪುರದಲ್ಲಿ ಕಾರ್ಯಕ್ರಮ

ಜನ ಆಕ್ರೋಶ ಸುದ್ದಿ ಸುರಪುರ: ನಗರದಲ್ಲಿರುವ ನಿರಾಶ್ರಿತರ ವಸತಿ ರಹಿತ ಉಚಿತ ಆಶ್ರಯ ಕೇಂದ್ರವು ಬಡವರಿಗೆ ಬಹಳ ಅನುಕೂಲವಾಗಿದೆ ಎಂದು ಸಮುದಾಯ ಸಂಘಟಕರಾದ ತಿಪ್ಪಮ್ಮ ಬಿರಾದಾರ ಅವರು ಹೇಳಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಸುರಪುರ ನಗರಸಭೆ ಮತ್ತು ವಿಶ್ವ ಗಂಗಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗರದ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅವರು ಮಾತನಾಡಿ, ರಾಜ್ಯದಲ್ಲಿ ಸೂರಿಲ್ಲದೇ ಬದುಕುತ್ತಿರುವ ಎಷ್ಟೋ ನಿರಾಶ್ರಿತರಿಗೆ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಇಂತಹವರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

banner

ಬಸ್ ಸಿಗದಿದ್ದಾಗ ದುಬಾರಿ ಲಾಡ್ಜ್‌ಗಳಲ್ಲಿ ಇರಲು ಸಾಧ್ಯವಾಗದೆ ರಾತ್ರಿ ಹೊತ್ತು ಬಸ್ ನಿಲ್ದಾಣ ಮತ್ತು ಪುಟ್‌ಪಾತ್‌ಗಳಲ್ಲಿ ಮಲಗುವ ಪರಿಸ್ಥಿತಿ ನಿರಾಶ್ರಿತರಿಗೆ ಬರಬಾರದು. ಚಳಿ ಮತ್ತು ಸೊಳ್ಳೆಗಳಿಂದ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಆಶ್ರಯ ಕೇಂದ್ರವನ್ನು ತೆರೆಯಲಾಗಿದೆ. ಇದು ಈ ವರ್ಗದವರಿಗೆ ತುಂಬಾ ಉಪಯುಕ್ತವಾಗಿದೆ ಎಂದು ತಿಪ್ಪಮ್ಮ ಬಿರಾದಾರ ತಿಳಿಸಿದರು.

ಈ ಸಂದರ್ಭದಲ್ಲಿ ಆಶ್ರಯ ಶಾಖೆಯ ವ್ಯವಸ್ಥಾಪಕ ಚಿದಾನಂದ, ದೇವರೆಡ್ಡೆಪ್ಪಗೌಡ, ಪಾಚಪಯ್ಯ ಬಲಭೀಮ, ರೇಣುಕಾ, ಸಿಆರ್‌ಪಿಗಳಾದ ಗೀತಾ ವಾರಿ, ಶ್ರೀದೇವಿ ಹಿರೇಮಠ, ವೆಂಕಟೇಶ ಬಾಬು ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಆಶ್ರಯ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

 

 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ