Home ರಾಷ್ಟ್ರೀಯ ಸುದ್ದಿ ನಕಲಿ ಬಿಲ್: ಯಾಳವಾರ ಗ್ರಾ.ಪಂ.ನಲ್ಲಿ ₹1.34 ಕೋಟಿ ಲೂಟಿ ಆರೋಪ!

ನಕಲಿ ಬಿಲ್: ಯಾಳವಾರ ಗ್ರಾ.ಪಂ.ನಲ್ಲಿ ₹1.34 ಕೋಟಿ ಲೂಟಿ ಆರೋಪ!

by Laxmikanth Nayak
0 comments

ನಕಲಿ ಬಿಲ್: ಯಾಳವಾರ ಗ್ರಾ.ಪಂ.ನಲ್ಲಿ ₹1.34 ಕೋಟಿ ಲೂಟಿ ಆರೋಪ!

ಜನ ಆಕ್ರೋಶ ಸುದ್ದಿ ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಾಳವಾರ ಗ್ರಾಮ ಪಂಚಾಯತಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಪಂಚಾಯತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಯವರು (ಪಿಡಿಒ) ಸೇರಿಕೊಂಡು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಸುಮಾರು ಒಂದು ಕೋಟಿ ಮೂವತ್ತನಾಲ್ಕು ಲಕ್ಷ ರೂಪಾಯಿ (₹1.34 ಕೋಟಿ) ಹಣವನ್ನು ಸೆಳೆದಿರುವುದಾಗಿ ಆರೋಪಿಸಲಾಗಿದೆ.

ಗ್ರಾಮ ಪಂಚಾಯತಿಯ 15ನೇ ಹಣಕಾಸು ಅನುದಾನದ ಹಣವನ್ನು ನಕಲಿ ಬಿಲ್‌ಗಳ ಮೂಲಕ ಲೂಟಿ ಮಾಡಲಾಗಿದೆ. ಯಾವುದೇ ಸರಕು ಖರೀದಿ ಮಾಡದೆ ಅಥವಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳದೆ, ಏಜೆನ್ಸಿಗಳಿಗೆ ಕಮಿಷನ್‌ ನೀಡಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಲಕಮ್ಮ ಯಮುನಪ್ಪ ಮತ್ತು ಅಭಿವೃದ್ಧಿ ಅಧಿಕಾರಿಯಾದ ಅರವಿಂದ ಚವ್ಹಾಣ ಅವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಜಿಲ್ಲಾ ಪಂಚಾಯತಿಗೆ ದೂರು:

banner

ಈ ಅಕ್ರಮದ ಕುರಿತು ಯಾಳವಾರದ ನಿವಾಸಿ ಶರಣಪ್ಪರೆಡ್ಡಿ ಕೊಳ್ಳಿ ಲಖಣಾಪುರ ಎನ್ನುವವರು ಜಿಲ್ಲಾ ಪಂಚಾಯತಿಗೆ ದೂರು ನೀಡಿದ್ದಾರೆ. ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ (ಸಿಇಒ) ನೀಡಿರುವ ದೂರಿನಲ್ಲಿ, ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಈ ಗಂಭೀರ ಪ್ರಕರಣವನ್ನು ನಿರ್ಲಕ್ಷಿಸಿದರೆ, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಭಾರಿ ಹಣಕಾಸು ಅಕ್ರಮದಿಂದಾಗಿ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಇದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದು, ಜಿಲ್ಲಾ ಪಂಚಾಯತಿ ಮುಂದಿನ ಕ್ರಮ ಕೈಗೊಳ್ಳುವುದನ್ನು ಕಾದು ನೋಡುತ್ತಿದ್ದಾರೆ.

 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?