Home ರಾಜಕೀಯ ಸಮಾನತೆ ಮತ್ತು ಭ್ರಾತೃತ್ವದಿಂದ ಬದುಕಲು ವಾಲ್ಮೀಕಿ ಸಂದೇಶ: ಶಾಸಕ ಕಂದಕೂರ ಕರೆ

ಸಮಾನತೆ ಮತ್ತು ಭ್ರಾತೃತ್ವದಿಂದ ಬದುಕಲು ವಾಲ್ಮೀಕಿ ಸಂದೇಶ: ಶಾಸಕ ಕಂದಕೂರ ಕರೆ

by Laxmikanth Nayak
0 comments

ಸಮಾನತೆ ಮತ್ತು ಭ್ರಾತೃತ್ವದಿಂದ ಬದುಕಲು ವಾಲ್ಮೀಕಿ ಸಂದೇಶ: ಶಾಸಕ ಕಂದಕೂರ ಕರೆ

ಜನ ಆಕ್ರೋಶ ಸುದ್ದಿ ಜಾಲ ಗುರುಮಠಕಲ್ (ಯಾದಗಿರಿ ಜಿಲ್ಲೆ):ಗುರುಮಠಕಲ್ ಮತಕ್ಷೇತ್ರದ ಮಾನ್ಯ ಶಾಸಕರು ಹಾಗೂ ಜನಪ್ರಿಯ ನಾಯಕರಾದ ಶ್ರೀ ಶರಣಗೌಡ ಕಂದಕೂರ ಅವರು ಇಂದು ನಾಗರಬಂಡಾ ಗ್ರಾಮದಲ್ಲಿ ಆದಿಕವಿ ಭಗವಾನ್ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಸಮಾರಂಭದ ನಂತರ ಮಾತನಾಡಿದ ಶಾಸಕರು, ಆದಿಕವಿ ವಾಲ್ಮೀಕಿಯವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಸಮಾಜದ ಕುಲಗುರುಗಳು ನೀಡಿದ ಆದರ್ಶಗಳ ಅಡಿಯಲ್ಲಿ ನಾವೆಲ್ಲರೂ ಜೀವನ ಸಾಗಿಸಬೇಕು. ಐತಿಹಾಸಿಕ ಮಹಾಪುರುಷರ ಆಶಯವೇ ಎಲ್ಲರೂ ಸಮಾನವಾಗಿ ಜೀವಿಸಬೇಕು ಎಂಬುದಾಗಿದೆ ಎಂದು ಹೇಳಿದರು.

ಮೇಲು-ಕೀಳು ತ್ಯಜಿಸಿ ಬಾಳೋಣ

banner

“ಮೂಲದಲ್ಲಿ ನಾವೆಲ್ಲರೂ ಒಂದೇ ಆಗಿದ್ದು, ಆನಂತರವೇ ಮನುಷ್ಯರು ಮೇಲು ಕೀಳುಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಅಂತಹ ಭೇದಭಾವಗಳನ್ನೆಲ್ಲಾ ತ್ಯಜಿಸಿ, ಭ್ರಾತೃತ್ವದ ಭಾವನೆಯಿಂದ ಜೀವಿಸಬೇಕು,” ಎಂದು ಶಾಸಕರು ಈ ಸಂದರ್ಭದಲ್ಲಿ ನುಡಿದರು.

ವೇದಿಕೆಯ ಮೇಲೆ ವಾಲ್ಮೀಕಿ ಶ್ರೀ ಗೋಲಪಲ್ಲಿ, ಹನುಮೇಗೌಡ ಬೀರನಕಲ್, ಗ್ರಾಮದ ವಾಲ್ಮೀಕಿ ಸಮುದಾಯದ ಮುಖಂಡರು, ಗ್ರಾಮಸ್ಥರು ಮತ್ತು ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀಗಳು, ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಶಾಸಕರೊಂದಿಗೆ ಹೆಜ್ಜೆಹಾಕಿ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದರು.

 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ