Home ರಾಜಕೀಯ ಹಿಂಗಾರು ನೀರಿಗಾಗಿ ನ. 4ರ ಐಸಿಸಿ ಸಭೆಗೆ ಒತ್ತಾಯ: ಏಪ್ರಿಲ್ 10ರ ವರೆಗೆ ನೀರು ಹರಿಸಿ, ಹಳೆಯ ನಿಯಮ ಸಡಿಲಿಸಿ ಎಂದು ರೈತರ ಆಗ್ರಹ

ಹಿಂಗಾರು ನೀರಿಗಾಗಿ ನ. 4ರ ಐಸಿಸಿ ಸಭೆಗೆ ಒತ್ತಾಯ: ಏಪ್ರಿಲ್ 10ರ ವರೆಗೆ ನೀರು ಹರಿಸಿ, ಹಳೆಯ ನಿಯಮ ಸಡಿಲಿಸಿ ಎಂದು ರೈತರ ಆಗ್ರಹ

by Laxmikanth Nayak
0 comments

ಜನ ಆಕ್ರೋಶ ಸುದ್ದಿಜಾಲ

ಶಹಾಪುರ(ಯಾದಗಿರಿ):ನಾರಾಯಣಪುರದ ಬಸವಸಾಗರ ಜಲಾಶಯದ ಎಡದಂಡೆ ಕಾಲುವೆ ವ್ಯಾಪ್ತಿಯ ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ನೀರು ಹರಿಸುವ ಕುರಿತು ನಿರ್ಧರಿಸಲು ನವೆಂಬರ್ 4 ರಂದು ನಡೆಯಲಿರುವ ಐಸಿಸಿ (Irrigation Consultative Committee) ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ರೈತರ ಧ್ವನಿಯಾಗಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಯುವ ಘಟಕವು ಒತ್ತಾಯಿಸಿದೆ.

ಮುಂಗಾರು ಬೆಳೆಗಳು ಅತಿವೃಷ್ಟಿಯಿಂದ ಹಾಳಾಗಿರುವ ಹಿನ್ನೆಲೆಯಲ್ಲಿ, ಹಿಂಗಾರು ಹಂಗಾಮಿಗೆ ಅನುಕೂಲವಾಗುವಂತೆ ಏಪ್ರಿಲ್ 10 ರವರೆಗೆ ಕಾಲುವೆಗೆ ನೀರು ಹರಿಸಲು ಕ್ರಮ ವಹಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ವೆಂಕಟೇಶ ನಾಯಕ ಆಲ್ದಾಳ ಅವರು ಮನವಿ ಮಾಡಿದ್ದಾರೆ. ಹಿಂಗಾರಿನಲ್ಲಿ ಶೇಂಗಾ, ಜೋಳ, ಕಡಲಿ ಮುಂತಾದ ಬೆಳೆಗಳನ್ನು ಬೆಳೆಯಲು ಇದು ಸಹಾಯಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಿಯಮ ಸಡಿಲಿಕೆಗೆ ಬೇಡಿಕೆ:

banner

ಕಳೆದ ವರ್ಷ ಜಾರಿಯಲ್ಲಿದ್ದ ’14 ದಿನ ಚಾಲು, 10 ದಿನ ಬಂದ್’ ನೀರು ಬಿಡುವ ಪ್ರಕ್ರಿಯೆಯನ್ನು ಸಡಿಲಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಈ ಹಳೆಯ ನಿಯಮದಿಂದಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಬಿಸಿಲು ಹೆಚ್ಚಾದಾಗ ಕಾಲುವೆಯ ಕೊನೆಯ ಭಾಗದ ಗದ್ದೆಗಳಿಗೆ ನೀರು ತಲುಪಲು ಸಾಧ್ಯವಾಗಿರಲಿಲ್ಲ. ಇದರಿಂದ ವಡಗೇರಾ ಭಾಗದ ಅನೇಕ ರೈತರು ಸಂಕಷ್ಟ ಎದುರಿಸಿದ್ದರು.
ಆದ್ದರಿಂದ, ಈ ಬಾರಿ ’14 ದಿನ ಚಾಲು, 8 ದಿನ ಬಂದ್’ ಪ್ರಕ್ರಿಯೆ ಜಾರಿಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.

ಶಾಸಕರಿಗೆ ಮನವಿ:

ಐಸಿಸಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ಗೌಡ ದರ್ಶನಾಪುರ, ಯಾದಗಿರಿ ಶಾಸಕ ಶ್ರೀ ಚನ್ನಾರೆಡ್ಡಿ ತುನ್ನೂರು, ಗುರುಮಿಠಕಲ್ ಶಾಸಕ ಶ್ರೀ ಶರಣುಗೌಡ ಕಂದಕೂರು, ಸುರಪುರ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ ಮತ್ತು ಜೇವರ್ಗಿ ಶಾಸಕ ಶ್ರೀ ಅಜಯ್ ಸಿಂಗ್ ರವರು ತಪ್ಪದೇ ಹಾಜರಾಗಿ, ಐಸಿಸಿ ಅಧ್ಯಕ್ಷರೂ ಆದ ಸಚಿವ ಆರ್.ಬಿ. ತಿಮ್ಮಾಪುರಿ ಅವರ ಮೇಲೆ ಒತ್ತಡ ಹೇರಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?