Home ಅಂತರಾಷ್ಟ್ರೀಯ ಸುದ್ದಿ ಸುರಪುರ ಬಸ್ ನಿಲ್ದಾಣದಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

ಸುರಪುರ ಬಸ್ ನಿಲ್ದಾಣದಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

by Laxmikanth Nayak
0 comments

ಜನ ಆಕ್ರೋಶ ಸುದ್ದಿಜಾಲ

ಯಾದಗಿರಿ ಜಿಲ್ಲೆ, ಸುರಪುರ:ಸುರಪುರ ಬಸ್ ನಿಲ್ದಾಣದಲ್ಲಿ ನಿನ್ನೆ ಸಾಯಂಕಾಲ ಶಾಲಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಬಸ್ ತಡೆದು ಪ್ರತಿಭಟನೆ ನಡೆಸಿದರು.

ಬೈರಿಮರಡಿ, ಬಾದಾಪುರ, ಶೆಟ್ಟಿಕೇರ ದೊಡ್ಡಿ ಮತ್ತು ಶೆಟ್ಟಿಕೇರ ಮುಂತಾದ ಭಾಗಗಳಿಗೆ ಬಸ್‌ಗಳು ತಡವಾಗಿ ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಾಧಾರಣವಾಗಿ ಸಂಜೆ 4:30 ಗಂಟೆಗೆ ಬರುವ ಬಸ್‌ಗಳು 6:30 ಗಂಟೆಗೆ ಮಾತ್ರ ಬರುತ್ತಿರುವುದರಿಂದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಮನೆ ತಲುಪಲು ರಾತ್ರಿ ಆಗುತ್ತಿದೆ ಎಂದು ಅವರು ದೂರಿದರು.

ವಿದ್ಯಾರ್ಥಿಗಳು ಮನವಿ ಪತ್ರದ ಮೂಲಕ,
“ಶಾಲೆ ಮುಗಿದ ನಂತರ ಹಳ್ಳಿಗಳಿಗೆ ಹೋಗುವ ವಿದ್ಯಾರ್ಥಿಗಳಿಗಾಗಿ ಸಂಜೆ 4:30ಕ್ಕೆ ಸರಿಯಾದ ಬಸ್ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಸುರಕ್ಷತೆಗೆ ಧಕ್ಕೆಯುಂಟಾಗುವ ಭೀತಿ ಇದೆ,” ಎಂದು ಬಸ್ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಿದರು.

banner

ಈ ವೇಳೆ ಆರಕ್ಷಕ ನಿರೀಕ್ಷಕರಾದ ಉಮೇಶ್ ನಾಯಕ, ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕ ಕಾರ್ಯಾಧ್ಯಕ್ಷ ಶಿವರಾಜ ವಗ್ಗರ್, ಯುವ ಘಟಕ ಅಧ್ಯಕ್ಷ ರವಿ ನಾಯಕ, ರಾಜು ಬಡಿಗೇರ, ಬೈರಿಮರಡಿ ಗ್ರಾಮ ಪಂಚಾಯಿತಿ ಸದಸ್ಯ ಬಲಭೀಮ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಗೆ ಹಾಜರಿದ್ದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?