Home ರಾಜಕೀಯ ನಗರಸಭೆ ಆಸ್ತಿ ಕಾಯ್ದಿಟ್ಟುಕೊಳ್ಳುವಲ್ಲಿ ಶಹಾಪೂರ ಪೌರಾಯುಕ್ತರ ಬೇಜವಾಬ್ದಾರಿತನ

ನಗರಸಭೆ ಆಸ್ತಿ ಕಾಯ್ದಿಟ್ಟುಕೊಳ್ಳುವಲ್ಲಿ ಶಹಾಪೂರ ಪೌರಾಯುಕ್ತರ ಬೇಜವಾಬ್ದಾರಿತನ

by Laxmikanth Nayak
0 comments

ಶಹಾಪೂರ:ಯಾದಗಿರಿ ಜಿಲ್ಲೆಯ ಶಹಾಪೂರ ನಗರಸಭೆಯ ವಾರ್ಡ್ ನಂ. 2 ರ ದೇವಿನಗರದಲ್ಲಿ ರಸ್ತೆ ಒತ್ತುವರಿ ಮತ್ತು ಅಕ್ರಮ ಕಟ್ಟಡ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪೌರಾಯುಕ್ತರ ಬೇಜವಾಬ್ದಾರಿತನ ವಿವಾದಕ್ಕೆ ಕಾರಣವಾಗಿದೆ. ಬೀದರ-ಬೆಂಗಳೂರು ಮುಖ್ಯ ರಸ್ತೆಯಿಂದ ದೇವಿ ನಗರದಲ್ಲಿರುವ ರಾಜರಾಜೇಶ್ವರಿ ಬಾರ್‌ನಿಂದ ಮೋಟಗಿಮನೆಯ ವರೆಗಿನ ನಗರಸಭೆ ರಸ್ತೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆಯಗುಂಟ ಇರುವ ಮನೆಗಳ ನಿವಾಸಿಗಳು ರಸ್ತೆ ಒತ್ತುವರಿ ಮಾಡಿ ಕಟ್ಟಡಗಳನ್ನು ನಿರ್ಮಿಸಿದ್ದು, ಇದರಿಂದ ಸಾರ್ವಜನಿಕರಿಗೆ ಮತ್ತು ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಯ ನಕ್ಷೆಯ ಪ್ರಕಾರ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸುವಂತೆ ಸಾರ್ವಜನಿಕರು ನಗರಸಭೆಗೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ನಗರಸಭೆ ವಿರುದ್ಧ ನ್ಯಾಯಾಲಯದಲ್ಲಿ PETITION Nos. 201652-201656/2017 & 201752-753/2017 (LB-RES) ಮೊಕದ್ದಮೆ ದಾಖಲಾಗಿತ್ತು. ಗೌರವಾನ್ವಿತ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠವು ದಿನಾಂಕ 17-04-2017 ರಂದು ತಡೆಯಾಜ್ಞೆ ಆದೇಶ ಹೊರಡಿಸಿ, ಪೌರಾಯುಕ್ತರು ನಾಲ್ಕು ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಆದರೆ, ನ್ಯಾಯಾಲಯದ ಆದೇಶ ಬಂದಿದ್ದರೂ, ಇತ್ತೀಚೆಗೆ ವಾರ್ಡ್ ನಂ. 2 ರ ನ.ನಂ. 105 ಮತ್ತು 106 ರ ರಸ್ತೆ ಹಾಗೂ ಚರಂಡಿಯ ಮೇಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸದೇ ಪೌರಾಯುಕ್ತರು ನ್ಯಾಯಾಲಯದ ಆದೇಶಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

banner

ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಮಾನ್ಯ ಜಿಲ್ಲಾಧಿಕಾರಿಗಳು (ಜಿಲ್ಲಾ ನಗರಾಭಿವೃದ್ಧಿ ಕೋಶ), ಯಾದಗಿರಿ ಅವರು ದಿನಾಂಕ 09-10-2025 ರಂದು ನೆನಪೋಲೆ ಪತ್ರ ಬರೆದಿದ್ದರೂ, ಪೌರಾಯುಕ್ತರು ಸಮರ್ಪಕವಾಗಿ ಸ್ಪಂದಿಸಿಲ್ಲ. ಅಷ್ಟೇ ಅಲ್ಲದೇ, “ನಾನು ತೆರವು ಗೊಳಿಸುವ ಕೆಲಸ ಮಾಡುವುದಿಲ್ಲ, ಡಿಸಿ, ಆರ್‌ಸಿ, ಪಿಡಿ-ಡಿಯುಡಿಸಿ ಹಾಗೂ ಡಿಎಂಎ ಬೆಂಗಳೂರು ಇವರೇ ಇಲ್ಲಿಗೆ ಬಂದು ಸರ್ವೆ ಇತ್ಯಾದಿ ಕೆಲಸಗಳನ್ನು ಮಾಡಿಕೊಳ್ಳಲಿ” ಎಂದು ನಿರ್ಲಜ್ಜೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಒತ್ತುವರಿ ತೆರವುಗೊಳಿಸುವ ಕುರಿತು ಕ್ರಮ ಕೈಗೊಳ್ಳುವುದಿಲ್ಲ ಎಂದು ಪೌರಾಯುಕ್ತರು ಸ್ಪಷ್ಟಪಡಿಸಿರುವುದರಿಂದ, ಅವರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಾಗಿದೆ.

ಪೌರಾಯುಕ್ತರ ಈ ದುರಾಡಳಿತ ಮತ್ತು ನಿರ್ಲಕ್ಷ್ಯಕ್ಕೆ ರೋಸಿಹೋಗಿರುವ ಇದೇ ವಾರ್ಡಿನ ನಿವಾಸಿ ಕೃಷ್ಣ ತಂದೆ ಸಾಯಬಣ್ಣ ಅವರು, ಸರಕಾರಿ ಜಾಗ ಒತ್ತುವರಿ ಮಾಡಿರುವ ಬಗ್ಗೆ ಉನ್ನತ ಅಧಿಕಾರಿಗಳ ಗಮನ ಸೆಳೆಯಲು, ತಮ್ಮದೇ ವಾರ್ಡಿನ ಸಿ.ಸಿ. ರಸ್ತೆಯಗಲಕ್ಕೂ ಅಡ್ಡಲಾಗಿ ತಾವೇ ಸ್ವತಃ ತಗ್ಗು ಅಗೆಯಲು ನಿರ್ಧರಿಸಿರುವುದಾಗಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

 

 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?