Home ರಾಜಕೀಯ ಆತ್ಮನಿರ್ಭರ ಭಾರತ, ಜಿಎಸ್‌ಟಿ ಕುರಿತು ಬಿಜೆಪಿ ಕಾರ್ಯಾಗಾರ

ಆತ್ಮನಿರ್ಭರ ಭಾರತ, ಜಿಎಸ್‌ಟಿ ಕುರಿತು ಬಿಜೆಪಿ ಕಾರ್ಯಾಗಾರ

by Laxmikanth Nayak
0 comments

ಜನ ಆಕ್ರೋಶ ವರದಿ

ಸುರಪುರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸುರಪುರ ಮಂಡಲ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ‘ಆತ್ಮನಿರ್ಭರ ಭಾರತ ಮತ್ತು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ)’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

​ಕಾರ್ಯಾಗಾರವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರು, ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಶ್ರೀ ನರಸಿಂಹ ನಾಯಕ (ರಾಜುಗೌಡ್ರು) ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ರಾಜುಗೌಡ್ರು ಅವರು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಆತ್ಮನಿರ್ಭರ ಭಾರತ’ ಪರಿಕಲ್ಪನೆ ಹಾಗೂ ದೇಶದ ಆರ್ಥಿಕತೆಗೆ ಜಿಎಸ್‌ಟಿ ವ್ಯವಸ್ಥೆಯ ಕೊಡುಗೆಯ ಕುರಿತು ಕಾರ್ಯಕರ್ತರಿಗೆ ವಿವರವಾದ ಮಾಹಿತಿ ನೀಡಿದರು.

​ಪ್ರಮುಖ ಗಣ್ಯರ ಉಪಸ್ಥಿತಿ

​ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಜಾ ಹನಮಪ್ಪ ನಾಯಕ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಬಸವರಾಜ ವಿಭೂತಿಹಳ್ಳಿ, ಸುರಪುರ ಮಂಡಲ ಅಧ್ಯಕ್ಷರಾದ ಶ್ರೀ ವೇಣುಮಾದವ್ ನಾಯಕ ಉಪಸ್ಥಿತರಿದ್ದರು.

​ಕಾರ್ಯಾಗಾರದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೆಲಪ್ಪ ಗುಳಗಿ, ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಭೀಮಾಶಂಕರ ಬಿಲ್ಲವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಿಂಗಣ್ಣ ಐಕೊರು, ಕಾರ್ಯಾಗಾರದ ಜಿಲ್ಲಾ ಸಹ ಸಂಚಾಲಕರು ಮೌನೇಶ್ ಬೆಳಗೇರಾ, ತಾಲೂಕು ಸಂಚಾಲಕರು ಗಂಗಾಧರ ನಾಯಕ ಸೇರಿದಂತೆ ಯಲ್ಲಪ್ಪ ಕುರಕುಂದಿ, ರಾಜಾ ಶ್ರೀ ಮುಕುಂದ ನಾಯಕ, ಎಚ್.ಸಿ ಪಾಟೀಲ್, ವೇಣುಗೋಪಾಲ್ ಜೇವರ್ಗಿ, ಎಸ್ .ಎನ್ ಪಾಟೀಲ್, ಪ್ರಕಾಶ ಸಜ್ಜನ, ಬಲಭೀಮ ನಾಯಕ ಬೈರಿಮಡ್ಡಿ, ನರಸಿಂಹ ಕಾಂತ ಪಂಚಮಗಿರಿ, ಶರಣಯ್ಯ ಮಠಪತಿ, ತಿಪ್ಪರಾಜು ಬಾಚಿಮಟ್ಟಿ, ವಿಜಯ ಕುಮಾರ್ ಮಂಗಿಹಾಳ, ಲಕ್ಷ್ಮಿಕಾಂತ. ದೇವರುಗೋನಾಲ ಹಾಗೂ ಪಕ್ಷದ ಹಲವಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

banner

​ಕಾರ್ಯಕ್ರಮವನ್ನು ಶ್ರೀ ಜಗದೀಶ ಪಾಟೀಲ್ ಸೂಗೂರ ಅವರು ನಿರೂಪಿಸಿದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?