Home ಜಿಲ್ಲಾ ಸುದ್ದಿಗಳು ಕೇಂದ್ರ ಕಾರಾಗೃಹ ಕಲಬುರಗಿ ವೀಕ್ಷಣೆ: ಅರುದಂತಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ!

ಕೇಂದ್ರ ಕಾರಾಗೃಹ ಕಲಬುರಗಿ ವೀಕ್ಷಣೆ: ಅರುದಂತಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ!

by Laxmikanth Nayak
0 comments

ರಂಗಪೇಠ (ಕಲಬುರಗಿ):ಕಾನೂನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡುವ ಮಹತ್ವದ ಹೆಜ್ಜೆಯಾಗಿ, ರಂಗಪೇಠದ ಅರುದಂತಿ ಕಾನೂನು ಮಹಾವಿದ್ಯಾಲಯವು (Arudanti Law College) ತನ್ನ ವಿದ್ಯಾರ್ಥಿಗಳಿಗೆ ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಶೈಕ್ಷಣಿಕ ವೀಕ್ಷಣಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಿತ್ತು.


ಪ್ರಿನ್ಸಿಪಾಲ್ ನೇತೃತ್ವದಲ್ಲಿ ಪ್ರವಾಸ


ಕಾಲೇಜಿನ ಪ್ರೀನ್ಸಿಪಾಲ್ ಲಕ್ಷ್ಮೀಶ ಪೂಜಾರಿ ಅವರ ನೇತೃತ್ವದಲ್ಲಿ ಕಾನೂನು ವಿದ್ಯಾರ್ಥಿಗಳು ಈ ಮಹತ್ವದ ಪ್ರವಾಸದಲ್ಲಿ ಭಾಗವಹಿಸಿದರು. ಕಾನೂನು ಪದ್ಧತಿ ಮತ್ತು ಕಾರಾಗೃಹದ ಕಾರ್ಯನಿರ್ವಹಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ನೇರ ಅನುಭವ ನೀಡುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿತ್ತು.


ವ್ಯವಸ್ಥೆಗಳ ಬಗ್ಗೆ DYSP ಅವರಿಂದ ವಿವರಣೆ

banner


ಕೇಂದ್ರ ಕಾರಾಗೃಹದ ಉಪ ಅಧೀಕ್ಷಕರು (DYSP) ಆದ ಚನ್ನಪ್ಪ ಅವರು ವಿದ್ಯಾರ್ಥಿಗಳಿಗೆ ಕಾರಾಗೃಹದ ಒಳಗೆ ಇರುವ ವ್ಯವಸ್ಥೆಗಳು ಮತ್ತು ಕೈದಿಗಳ ಕುರಿತು ಸಮಗ್ರ ಹಾಗೂ ಸವಿಸ್ತಾರವಾದ ವಿವರಣೆಯನ್ನು ನೀಡಿದರು. ಅಪರಾಧ ಮತ್ತು ಶಿಕ್ಷೆಯ ಪ್ರಕ್ರಿಯೆಗಳ ಪ್ರಾಯೋಗಿಕ ಅರಿವು ಪಡೆಯಲು ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿತ್ತು.


ಉಪಸ್ಥಿತಿ

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಶರಣು, ಮಲ್ಲಪ್ಪ, ರಾಘವೇಂದ್ರ, ಕಾಶೀಮ್ ಸಾಬ್, ದೀಪಿಕಾ, ನವೀನ ಅವರು ವಿದ್ಯಾರ್ಥಿಗಳೊಂದಿಗೆ ಉಪಸ್ಥಿತರಿದ್ದರು.
ಪ್ರವಾಸದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೆಂದರೆ: ಶಂಕರಗೌಡ, ಕಲ್ಯಾಣರಾವ್, ಶರಣು ಹಿರೇಮಠ, ಸಚಿನ ಕುಮಾರ ನಾಯಕ, ಮಹೇಶ, ದೇವು, ದಶರಥ, ಮೇಘಾ, ರೆಶ್ಮಾ, ವಿನೋದ, ರವಿಂದ್ರ, ಮಹೇಬೂಬ್ ಸೇರಿದಂತೆ ಇನ್ನಿತರ ಅನೇಕ ಕಾನೂನು ವಿದ್ಯಾರ್ಥಿಗಳು ಹಾಜರಿದ್ದರು.


You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ