Home ಅಪರಾಧ ಸುದ್ದಿ ರಾಯಚೂರು: ಸಮಾಜವಿರೋಧಿಕೃತ್ಯ; ಐವರನ್ನುಜಿಲ್ಲೆಯಿಂದಗಡಿಪಾರುಮಾಡಿದಎಸಿ

ರಾಯಚೂರು: ಸಮಾಜವಿರೋಧಿಕೃತ್ಯ; ಐವರನ್ನುಜಿಲ್ಲೆಯಿಂದಗಡಿಪಾರುಮಾಡಿದಎಸಿ

by Laxmikanth Nayak
0 comments

ರಾಯಚೂರು: ಸಮಾಜ ವಿರೋಧಿ ಕೃತ್ಯ; ಐವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿದ ಎಸಿ

ರಾಯಚೂರು: ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ರಾಯಚೂರು ಜಿಲ್ಲೆಯಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಐವರ ಪೈಕಿ ನಾಲ್ವರನ್ನು ವಿಜಯಪುರ ಜಿಲ್ಲೆಗೆ ಮತ್ತು ಓರ್ವ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಯಾರಿಗೆ, ಎಲ್ಲಿಗೆ ಗಡಿಪಾರು?

banner

ಮಿರ್ಜಾಪುರ ಗ್ರಾಮದ ಮಲದಕಲ್ ಮಲ್ಲಿಕಾರ್ಜುನ, ಅರೋಲಿ ಭೀಮಣ್ಣ, ಗೋರೆಪ್ಪ ಮತ್ತು ತಾಯಪ್ಪ ಅವರನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ, ಗ್ರಾಮೀಣ, ಹೋರ್ತಿ ಮತ್ತು ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಗಳಿಗೆ ಗಡಿಪಾರು ಮಾಡಲಾಗಿದೆ. ಆಲಾದಿ ಎಂಬ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಎರಡು ತಿಂಗಳ ಅವಧಿ ನಿಗದಿ

ಗಡಿಪಾರು ಅವಧಿಯನ್ನು 2025ರ ನವೆಂಬರ್ 6ರಿಂದ 2026ರ ಜನವರಿ 6ರವರೆಗೆ ಒಟ್ಟು ಎರಡು ತಿಂಗಳುಗಳ ಕಾಲ ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ಗಡಿಪಾರು ಮಾಡಲ್ಪಟ್ಟವರು ಆಯಾ ಪೊಲೀಸ್ ಠಾಣೆಗಳಿಗೆ ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಗಡಿಪಾರು ಅವಧಿಯಲ್ಲಿ ಈ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿಗಾವಹಿಸುವಂತೆ ಮತ್ತು ಆದೇಶ ಉಲ್ಲಂಘಿಸಿ ಯಾರಾದರೂ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರವೇಶಿಸಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಠಾಣಾಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಲಾಗಿದೆ. ಅಲ್ಲದೆ, ಆರೋಪಿಗಳು ಪ್ರತೀ ವಾರ ಆಯಾ ಪೊಲೀಸ್ ಠಾಣೆಗೆ ಹೋಗಿ ಹಾಜರಿ ನೀಡಬೇಕು ಎಂದು ತಿಳಿಸಲಾಗಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?