Home ಜಿಲ್ಲಾ ಸುದ್ದಿಗಳು ಸಾಲು ಮರದ ತಿಮ್ಮಕ್ಕ ನೆನಪಿನಲ್ಲಿ: ವಡಗೇರಾ ಡಿಡಿಯು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಸಾಲು ಮರದ ತಿಮ್ಮಕ್ಕ ನೆನಪಿನಲ್ಲಿ: ವಡಗೇರಾ ಡಿಡಿಯು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

by Laxmikanth Nayak
0 comments

ಸಾಲು ಮರದ ತಿಮ್ಮಕ್ಕ ನೆನಪಿನಲ್ಲಿ: ವಡಗೇರಾ ಡಿಡಿಯು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ


ವಡಗೇರಾ, ನ.15: ಪರಿಸರ ಸಂರಕ್ಷಕ ದಿ. ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥವಾಗಿ ವಡಗೇರಾ ಡಿಡಿಯು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ನಿರ್ವಹಣಾ ಮಂಡಳಿಯು ಆಯೋಜಿಸಿತ್ತು.


ಪರಿಸರ ಜಾಗೃತಿಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಮೊದಲು ತಿಮ್ಮಕ್ಕ ಅವರ ಪರಿಸರ ಪ್ರೀತಿಯನ್ನು ಸ್ಮರಿಸಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.
ಶಾಲೆಯ ಪ್ರಾಂಶುಪಾಲರಾದ ಶ್ರೀ ಜಸ್ಟಿನ್ ಕೆ.ಎಸ್. ಅವರು ಮಾತನಾಡಿ, ತಿಮ್ಮಕ್ಕ ಅವರ ಪರಿಸರ ಸೇವೆ ಮತ್ತು ಅವರು ಕೈಗೊಂಡ ಸಮಾಜಮುಖಿ ಕಾರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಸಹ ಶಿಕ್ಷಕರಾದ ಶ್ರೀ ನಮಾನಂದ ಅವರು ವಿದ್ಯಾರ್ಥಿಗಳಿಗೆ ತಿಮ್ಮಕ್ಕ ಅವರ ಹೋರಾಟ, ಸಾಧನೆ ಹಾಗೂ ಪರಿಸರ ಸಂರಕ್ಷಣೆಗೆ ಅವರ ಕೊಡುಗೆಗಳ ಮಹತ್ವವನ್ನು ವಿವರಿಸಿದರು.


ಈ ಸಂದರ್ಭದಲ್ಲಿ ಕಂಡಪ್ಪ ಸರ್, ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಸಸಿ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಜಾಗೃತಿ ಮೂಡಿಸಿದರು.

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ