Home ಜಿಲ್ಲಾ ಸುದ್ದಿಗಳು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಾಗನೂರ ಹರ್ಷ: ರೈತರೊಂದಿಗೆ ಜನ್ಮದಿನ ಹಾಗೂ ವಿಜಯೋತ್ಸವ

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಾಗನೂರ ಹರ್ಷ: ರೈತರೊಂದಿಗೆ ಜನ್ಮದಿನ ಹಾಗೂ ವಿಜಯೋತ್ಸವ

by Laxmikanth Nayak
0 comments

ಯಾದಗಿರಿ: ಬಿಹಾರ ಶಾಸಕಾಂಗ ಚುನಾವಣೆಯ ಫಲಿತಾಂಶ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಹೇಳಿದರು.

ಶುಕ್ರವಾರ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಸವಂತಪುರ ಗ್ರಾಮದಲ್ಲಿ  ಎನ್‌ಡಿಎ ಗೆಲುವಿನ ಹಿನ್ನೆಲೆಯಲ್ಲಿ ನೂರಾರು ರೈತರೊಂದಿಗೆ ತಮ್ಮ ಜನ್ಮದಿನವನ್ನು ಸಂಯುಕ್ತವಾಗಿ ಆಚರಿಸಿದ ಮಾಗನೂರ ಅವರು, ದೇಶಾದ್ಯಂತ ಇಂದು ಬಿಜೆಪಿ ಪರ ಅಲೆ ಎದ್ದಿದೆ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ದೃಢಪಡಿಸಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ‘ವೋಟ್ ಚೋರಿ’ ಎಂಬ ಸ್ಲೋಗನ್‌ನ್ನು ಮುಂದಿಟ್ಟುಕೊಂಡು ಚುನಾವಣೆಗೆ ಮುಖಮಾಡಿದರೂ, ಮತದಾರರು ಅದನ್ನು ತಳ್ಳಿ ಹಾಕಿದ್ದಾರೆ ಎಂದು ಅವರು ಹೇಳಿದರು.

 ಆರ್‌ಎಸ್‌ಎಸ್‌ ಮೇಲೆ ನಿಷ್ಪಕ್ಷಪಾತ ಕಾರಣವಿಲ್ಲದೆ ಆರೋಪ ಮಾಡುವ ಮೂಲಕ ಕೋಟ್ಯಾಂತರ ಹಿಂದೂಗಳ ಭಾವನೆಗಳೊಂದಿಗೆ ಆಟವಾಡಲಾಗಿದೆ. ಜನತೆ ಅದಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಗನೂರ ಟೀಕಿಸಿದರು.

ಮುಂದಿನ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಹಾರ ಫಲಿತಾಂಶ ದಿಕ್ಕು ತೋರುತ್ತಿದ್ದು, ರಾಷ್ಟ್ರವ್ಯಾಪಿಯಾಗಿ ಬಿಜೆಪಿ ಮತ್ತಷ್ಟು ಬಲವಾದ ಪಕ್ಷವಾಗಿ ಹೊರಹೊಮ್ಮುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಶೇಖರ ಮರಕಲ್, ಮಲ್ಲಿಕಾರ್ಜುನ ಕಂದಕೂರ, ವೀರೇಶ, ನಾಗರಾಜ ಬೀರಾದಾರ, ಶಿವಪ್ಪ, ಭೀಮನಗೌಡ ದಳಪತಿ, ರಾಯಗೌಡ ಐಕುರ, ಮೌನೇಶ ಹಾಗೂ ನೂರಾರು ರೈತರು ಹಾಜರಿದ್ದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?