Home ಜಿಲ್ಲಾ ಸುದ್ದಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯ ಶ್ಲಾಘನೀಯ- ಡಾ.ಜೆ.ವಿ.ಪುರುಷೋತ್ತಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯ ಶ್ಲಾಘನೀಯ- ಡಾ.ಜೆ.ವಿ.ಪುರುಷೋತ್ತಮ

by Laxmikanth Nayak
0 comments

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯ ಶ್ಲಾಘನೀಯ- ಡಾ.ಜೆ.ವಿ.ಪುರುಷೋತ್ತಮ

ಗುರುಮಿಠಕಲ್ :ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಾಹಿತ್ಯ ಮತ್ತು ನಾಡಿನ ಸಾಂಸ್ಕೃತಿಕತೆ ಬಗ್ಗೆ ಪರಿಚಯ ಮಾಡಿಸುವ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಈ ಚಕೋರ ವೇದಿಕೆಯ ಕಾರ್ಯಕ್ರಮ ಶ್ಲಾಘನೀಯ ಎಂದು ಗುರುಮಿಠಕಲ್ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜೆ.ವಿ.ಪುರುಷೋತ್ತಮ ಅವರು ಇಂದು ತಮ್ಮ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಾದಗಿರಿ ಜಿಲ್ಲೆಯ ಅಂದ್ರ ಗಡಿಭಾಗದ ಗುರುಮಿಠಕಲ್ ತಾಲೂಕಿನ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಇಂದು ಗಡಿಭಾಗದಲ್ಲಿ  “ಕನ್ನಡದ ಕಂಪು ಹರಡುವ ಕುರಿತು” ರಾಜ್ಯೋತ್ಸವದ ಅಂಗವಾಗಿ ಚಕೋರ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಅವರು ಅಧ್ಯಕ್ಷತೆ ವಹಿಸಿದ್ದರು.ವಿಶೇಷ ಉಪನ್ಯಾಸವನ್ನು ಶ್ರೀ ಲಕ್ಷ್ಮಯ್ಯ ಕಲಾಲ್ ವಿಶ್ರಾಂತ ಪಿಯೂ ಕಾಲೇಜಿನ ಪ್ರಾಂಶುಪಾಲರು ನೀಡಿದರು. ಆಶಯನುಡಿಯನ್ನು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ.ಸಿದ್ಧರಾಮ ಹೊನ್ಕಲ್ ಆಡಿದರು. ಮುಖ್ಯ ಅತಿಥಿಯಾಗಿ ಗುರುಮಿಠಕಲ್ ತಾಲೂಕಿನ ಕಸಾಪ ಅಧ್ಯಕ್ಷರಾದ ಶ್ರೀ ಬಸರೆಡ್ಡಿ ಪಾಟೀಲರು ಭಾಗವಹಿಸಿದ್ದರು. ಡಾ.ಬಾಬುರಾಯ ದೊರೆ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು.

banner

ನೂರಾರು ವಿದ್ಯಾರ್ಥಿಗಳಿಗೆ ಚಕೋರ ಕಾರ್ಯಕ್ರಮದ ಉದ್ದೇಶ ಹಾಗೂ ನಾಡು ನುಡಿ ಸಾಂಸ್ಕೃತಿಕ ಹಿರಿಮೆ ಗರಿಮೆ ಪರಿಚಯಿಸಿ ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂದು ಮಾತನಾಡಿದ ಪ್ರತಿಯೊಬ್ಬರ ಮಾತಿನ ಆಶಯ ಇದೆ ಆಗಿತ್ತು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?