Home ಜಿಲ್ಲಾ ಸುದ್ದಿಗಳು ಜ.3ಕ್ಕೆ ಸೂಗೂರು (ಎನ್)ದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಜ.3ಕ್ಕೆ ಸೂಗೂರು (ಎನ್)ದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

by Laxmikanth Nayak
0 comments

1008 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಯಾದಗಿರಿ : ಚಿತ್ತಾಪುರ ತಾಲೂಕಿನ ಸೂಗೂರು ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಶ್ರೀ ಕುಮಾರ ಭೋಜರಾಜನ ಜನ್ಮದಿನದ ಪ್ರಯುಕ್ತ ಜ.3ರಂದು ಸಂಜೆ 5ಕ್ಕೆ ಉಡಿ ತುಂಬುವ ಹಾಗೂ ತುಲಾಭಾರ ಕಾರ್ಯಕ್ರಮ ನೆರವೇರಲಿದೆ ಎಂದು ಶ್ರೀ ಭೋಜಲಿಂಗೇಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಹಿರಗಪ್ಪ ತಾತಾನವರು ಹೇಳಿದರು.

ನಗರದ ಭಕ್ತರ ಮನೆಯಲ್ಲಿ ಜನ್ಮದಿನೋತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಸಾನಿಧ್ಯವಹಿಸಿ ಮಾತನಾಡಿದರು.

ಶ್ರೀಮಠದ ವಕ್ತಾರ ಈರಣ್ಣ ಬಲ್ಕಲ್ ಮಾತನಾಡಿ, ಶ್ರೀ ಕುಮಾರ ಭೋಜರಾಜರ ಜನ್ಮದಿನ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ 1008 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಶ್ರೀಗಳ ತುಲಾಭಾರ ಕಾರ್ಯಕ್ರಮ ನೆರವೇರಲಿದ್ದು, ಶ್ರೀ ಭೋಜಲಿಂಗೇಶ್ವರ ಮಠದ ಪೀಠಾಧಿಪತಿ ಶ್ರೀ ಹಿರಗಪ್ಪ ತಾತಾನವರು ದಿವ್ಯ ಸಾನ್ನಿಧ್ಯವಹಿಸಲಿದ್ದು, ನಾಡಿನ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

banner

ಶಿಕ್ಷಕ ಶರಣಬಸಪ್ಪ ನಾಸಿ ಮಾತನಾಡಿ, ಶ್ರೀ ಕುಮಾರ ಭೋಜರಾಜರಿಗೆ ಹಾಗೂ ಶ್ರೀ ಹಿರಗಪ್ಪ ತಾತನವರಿಗೆ ಹಂಪನಗೌಡ ಭಕ್ತರಿಂದ ತುಲಾಭಾರ, ಸೂಗೂರ ಎನ್ ಭಕ್ತರಿಂದ ಕೇಕ್ ಸೇವೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದ್ದಾರೆ.

ಸಂದರ್ಭದಲ್ಲಿ ಯಾದಗಿರಿ ಸೇರಿ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಉಪಸ್ಥಿತರಿದ್ದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?