Home ರಾಜ್ಯ ಸುದ್ದಿ ಜನಆಕ್ರೋಶಪತ್ರಿಕಾವರದಿ: ಅಥಣಿಬಸ್ಟ್ಯಾಂಡ್ರಸ್ತೆಸಾವಿನಗುಂಡಿ!

ಜನಆಕ್ರೋಶಪತ್ರಿಕಾವರದಿ: ಅಥಣಿಬಸ್ಟ್ಯಾಂಡ್ರಸ್ತೆಸಾವಿನಗುಂಡಿ!

by Laxmikanth Nayak
0 comments
ಜನ ಆಕ್ರೋಶ ಪತ್ರಿಕಾ ವರದಿ: ಅಥಣಿ ಬಸ್ಟ್ಯಾಂಡ್ ರಸ್ತೆ ಸಾವಿನ ಗುಂಡಿ!

ಬೆಳಗಾವಿ: ಅಥಣಿ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹೃದಯ ಭಾಗದಲ್ಲಿರುವ ಬಸ್ಟ್ಯಾಂಡ್ ರೋಡ್ ಕೆಎಸ್ಆರ್ಟಿಸಿ ಕಾಂಪ್ಲೆಕ್ಸ್ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಬೃಹತ್ ತೆಗ್ಗು ಗುಂಡಿಗಳಿಂದ ಕೂಡಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಿದಷ್ಟೇ ಅಪಾಯಕಾರಿಯಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆ ಅನಾಹುತಕ್ಕೆ ಆಹ್ವಾನ ನೀಡುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ.

ತೆಗ್ಗು ಗುಂಡಿಗಳಲ್ಲಿ ಮುಳುಗಿದ ಬಸ್ಟ್ಯಾಂಡ್ ರಸ್ತೆ

ಅಥಣಿಯ ಬಸ್ ನಿಲ್ದಾಣಕ್ಕೆ ಹೋಗುವ ಪ್ರಮುಖ ರಸ್ತೆಯು ಸಂಪೂರ್ಣವಾಗಿ ಹೊಂಡಮಯವಾಗಿದೆ. ಈ ಗುಂಡಿಗಳು ಬೈಕ್ ಸವಾರರಿಗೆ ಮತ್ತು ಇತರ ವಾಹನಗಳಿಗೆ ಗೋಚರಿಸದ ‘ಕಾಣದ ತೆಗ್ಗುಂಡಿಗಳಂತೆ’ ಮಾರ್ಪಟ್ಟಿವೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ಅವುಗಳ ಆಳ ತಿಳಿಯದೆ ಅನೇಕ ಬೈಕ್ ಸವಾರರು ಪ್ರತಿದಿನ ಬೀಳುವ ಸಾಧ್ಯತೆಗಳಿವೆ. ಇಲ್ಲಿ ಈಗಾಗಲೇ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೊಡ್ಡ ಅನಾಹುತ ಸಂಭವಿಸುವ ಭೀತಿ ಸಾರ್ವಜನಿಕರನ್ನು ಕಾಡುತ್ತಿದೆ.

banner

ಅಪಘಾತ ಸಂಭವಿಸಿದರೆ ಹೊಣೆ ಯಾರು?

ರಸ್ತೆಗಳ ನಿರ್ವಹಣೆ ಸ್ಥಳೀಯ ಸಂಸ್ಥೆಗಳು ಮತ್ತು ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯಾಗಿದ್ದರೂ, ರಸ್ತೆಯ ಈ ದುಃಸ್ಥಿತಿ ನಿರ್ಲಕ್ಷ್ಯದ ಪರಮಾವಧಿಯನ್ನು ತೋರಿಸುತ್ತದೆ. ಸಾರ್ವಜನಿಕರು, “ಒಂದು ವೇಳೆ ಈ ರಸ್ತೆಯಲ್ಲಿ ಯಾರಿಗಾದರೂ ಗಂಭೀರ ಅಪಘಾತ ಸಂಭವಿಸಿದರೆ, ಇದಕ್ಕೆ ಯಾರು ಹೊಣೆಗಾರರು? ಶಾಸಕರು, ಜಿಲ್ಲಾಧಿಕಾರಿಗಳು, ಅಥವಾ ತಾಲೂಕಾ ಆಡಳಿತವೇ? ಹದಗೆಟ್ಟ ರಸ್ತೆಯಿಂದಾಗಿ ನಡೆಯುವ ಪ್ರತಿ ಅನಾಹುತಕ್ಕೂ ಸರ್ಕಾರವೇ ನೇರ ಹೊಣೆ” ಎಂದು ಪ್ರಶ್ನಿಸಿದ್ದಾರೆ.

ಸಮಾಜ ಸೇವಕರಿಂದ ಆಡಳಿತಕ್ಕೆ ಎಚ್ಚರಿಕೆ

ಸಮಾಜ ಸೇವಕ ಚಂದ್ರಕಾಂತ್ ಹುಕ್ಕೇರಿ ಅವರು ಚಿಕ್ಕೋಡಿ ಮಾಧ್ಯಮ ಮತ್ತು ಪತ್ರಿಕೆಗಳೊಂದಿಗೆ ಮಾತನಾಡಿ, ರಸ್ತೆಯ ದುಃಸ್ಥಿತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. “ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಬ್ಯುಸಿಯಾಗಿದ್ದರೂ, ಜನ ಸಂಚರಿಸುವ ರಸ್ತೆಗಳು ಹದಗೆಟ್ಟು ಹೋಗಿವೆ. ಅಧಿಕಾರಿಗಳು ಕಣ್ಣು ಇದ್ದರೂ ಕುರುಡರಂತೆ ವರ್ತಿಸುತ್ತಿದ್ದಾರೆ. ಮಾಧ್ಯಮ ವರದಿಗಳಿಗಾದರೂ ಎಚ್ಚೆತ್ತುಕೊಂಡು, ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಸಾರ್ವಜನಿಕರು ಈ ರಸ್ತೆ ಯಾವಾಗ ನಿರ್ಮಾಣವಾಗುತ್ತದೆ ಎಂಬುದು ನಿಗೂಢ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು, ತಾಲೂಕಾಡಳಿತ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮಾನ್ಯ ಶಾಸಕರು ಈ ರಸ್ತೆಯ ದುರಸ್ತಿಗೆ ತುರ್ತು ಗಮನಹರಿಸಿ, ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲವಾದರೆ, “ಹೇಳೋರಿಲ್ಲ, ಕೇಳೋರಿಲ್ಲ” ಎಂಬ ಸ್ಥಿತಿ ಮುಂದುವರಿದು, ರಸ್ತೆ ಯಥಾಸ್ಥಿತಿಯಲ್ಲಿಯೇ ಉಳಿಯಲಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ