Home ಅಪರಾಧ ಸುದ್ದಿ ತೆಂಗಿನ ಮರದಿಂದ ಬಿದ್ದ ಯುವಕ, ಆರ್.ಟಿ.ಓ ಮಲ್ಲಿಕಾರ್ಜುನ್ ಆರೋಗ್ಯ ವಿಚಾರಣೆ

ತೆಂಗಿನ ಮರದಿಂದ ಬಿದ್ದ ಯುವಕ, ಆರ್.ಟಿ.ಓ ಮಲ್ಲಿಕಾರ್ಜುನ್ ಆರೋಗ್ಯ ವಿಚಾರಣೆ

by Laxmikanth Nayak
0 comments

ಕೆ.ಆರ್.ಪೇಟೆ. ತೆಂಗಿನ ಮರದಿಂದ ಬಿದ್ದು ಗಂಭೀರ ಸ್ಥಿತಿಯಲ್ಲಿರುವ ಯುವಕನಿಗೆ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ಸಹಾಯ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ

ತಾಲೂಕಿನ ಬೂಕನಕೆರೆ ಹೋಬಳಿಯ ಮೋದೂರು ಗ್ರಾಮದ ಲೇಟ್ ಸ್ವಾಮಿಶೆಟ್ಟಿ ಪುತ್ರ ಸಂತೋಷ್ (23) ಕಳೆದ ಎರಡು ತಿಂಗಳ ಹಿಂದೆ ತೆಂಗಿನ ಮರದ ಎಳನೀರು ಕುಯ್ಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರೀ ಬಿದ್ದು ಸೊಂಟ ಹಾಗೂ ಕುತ್ತಿಗೆ ಭಾಗ ಗಂಭೀರ ಗಾಯಗೊಂಡು ಹಾಸಿಗೆ ಹಿಡಿದು ವಿಶ್ರಾಂತಿ ಪಡೆಯುತ್ತಿದ್ದ ಗಾಯಾಳು ಸಂತೋಷ್ ರವರ ನಿವಾಸಕ್ಕೆ ಸಮಾಜ ಸೇವಕ ಆರ್.ಟಿ. ಓ ಮಲ್ಲಿಕಾರ್ಜುನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯದ ಜೊತೆಗೆ ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ಧನ ಸಹಾಯ ನೀಡುವುದರ ಮೂಲಕ ಮಾನವೀಯತೆ ಮೆರೆದರು.

ಬಳಿಕ ಮಾತನಾಡಿದ ಅವರು ಇತ್ತೀಚೆಗೆ ಯುವಕರು ಹೆಚ್ಚು ಎಳನೀರು ವ್ಯಾಪಾರಕ್ಕೆ ಮತ್ತು ಕುಯ್ಯಲು ಹೋಗುತ್ತಿದ್ದಾರೆ ಆದರೆ ತಮ್ಮ ಉತ್ಸಾಹದಲ್ಲಿ ಅನಾಹುತವನ್ನು ಮರೆತು ಆತುರದಲ್ಲಿ ಕೆಲಸ ಮಾಡಲು ಹೋಗಿ ತಮ್ಮ ಕುಟುಂಬಕ್ಕೆ ಆಧಾರವಾಗಿ ಬೇಕಿದ್ದ ಕೆಲ ಯುವಕರು ಕುಟುಂಬದವರೇ ಆಸರೆಯಾಗುವ ಸ್ಥಿತಿಗೆ ತಲುಪುತ್ತಿದ್ದಾರೆ ಯುವಕರು ಯಾವುದೇ ಕೆಲಸವನ್ನು ಮಾಡಬೇಕಿದ್ದರೂ ಜಾಗೃತೆಯಿಂದ ಮಾಡಬೇಕು ಎಂದು ಸಲಹೆ ನೀಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಸರ್ಕಾರದ ಕಾರ್ಮಿಕ ಯುವಕರಿಗೆ ಪ್ರತ್ಯೇಕ ವಿಶೇಷ ವಿಮೆ ಹಾಗೂ ಉಪಯುಕ್ತ ಯೋಜನೆಗಳನ್ನು ಕೈಗೊಂಡಿದೆ ಅಂತಹ ಜನಸ್ನೇಹಿ ಯೋಜನೆಗಳನ್ನ ಅರ್ಹರಾಗಿ ಸಂಕಷ್ಟದಿಂದ ಪಾರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡೈರಿ ಕಾರ್ಯದರ್ಶಿ ಶಿವಕುಮಾರ್ (ಪಾಪಣ್ಣಿ), ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಗೋವಿಂದರಾಜು,ಹಿರಿಯ ಮುಖಂಡ ನಾಗರಾಜ್ (ಭಾವಿ ಹಟ್ಟಿ), ಮಂಚಶೆಟ್ಟಿ,ಬೈರಶೆಟ್ಟಿ, ಆಟೋ ಬಸವರಾಜ್, ಕುಮ್ಮಿ,ರಾಜಪ್ಪ, ಮಾದೇವ, ಸೇರಿದಂತೆ ಉಪಸ್ಥಿತರಿದ್ದರು.

banner

ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?