Home ರಾಜ್ಯ ಸುದ್ದಿ ಅಕ್ರಮ ಕಟ್ಟಡ ತೆರವಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಕಠಿಣ ನಿರ್ಧಾರ: ದೂರು ಬಂದ 130 ದಿನಗಳೊಳಗೆ ಡೆಮಾಲಿಷನ್‌ ಕಡ್ಡಾಯ

ಅಕ್ರಮ ಕಟ್ಟಡ ತೆರವಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಕಠಿಣ ನಿರ್ಧಾರ: ದೂರು ಬಂದ 130 ದಿನಗಳೊಳಗೆ ಡೆಮಾಲಿಷನ್‌ ಕಡ್ಡಾಯ

by Laxmikanth Nayak
0 comments
ಅಕ್ರಮ ಕಟ್ಟಡ ತೆರವಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಕಠಿಣ ನಿರ್ಧಾರ: ದೂರು ಬಂದ 130 ದಿನಗಳೊಳಗೆ ಡೆಮಾಲಿಷನ್‌ ಕಡ್ಡಾಯ

ಬೆಂಗಳೂರು, ನ. 27:ನಗರದಲ್ಲಿ ನಾಯಿ ಕೊಡೆಗಳಂತೆ ಹೆಚ್ಚುತ್ತಿರುವ ಅಕ್ರಮ ಕಟ್ಟಡ ನಿರ್ಮಾಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯಾವುದೇ ಕಟ್ಟಡ ಅಕ್ರಮ ಎಂದು ದೂರು ಬಂದ 130 ದಿನಗಳೊಳಗೆ ಅದನ್ನು ಕಡ್ಡಾಯವಾಗಿ ಡೆಮಾಲಿಷನ್‌ (ತೆರವು) ಮಾಡುವ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ನಿರ್ಧಾರದಿಂದ ಅಕ್ರಮ ಕಟ್ಟಡ ನಿರ್ಮಿಸುವವರಿಗೆ ಉಳಿಗಾಲವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪ್ರಾಧಿಕಾರ ನೀಡಿದೆ.

ಹೊಸ ಮಾರ್ಗಸೂಚಿ ಜಾರಿ

ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಉಲ್ಲಂಘನೆಯನ್ನು ತಡೆಗಟ್ಟಲು ಈ ಹೊಸ ಮಾರ್ಗಸೂಚಿ ರಚಿಸಲಾಗಿದ್ದು, ಇದರ ಅನ್ವಯ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಷ್ಟೇ ನಿರ್ಮಾಣ ಕಾರ್ಯ ನಡೆಯಬೇಕು. ಉಲ್ಲಂಘನೆ ಕಂಡುಬಂದರೆ ಭಾರಿ ದಂಡ ತೆರಬೇಕಾಗುತ್ತದೆ. ಪ್ರಾಯೋಗಿಕವಾಗಿ, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪೈಕಿ ಮೊದಲಿಗೆ ಬೆಂಗಳೂರು ಕೇಂದ್ರ ಪಾಲಿಕೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್‌ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಮಾರ್ಗಸೂಚಿ ಪ್ರಕಾರ ಕಟ್ಟಡ ನಿರ್ಮಿಸದಿದ್ದರೆ ನೋಟಿಸ್‌ ನೀಡಿ, ನಂತರ ಡೆಮಾಲಿಷನ್‌ ಮಾಡುವುದು ನಿಶ್ಚಿತ. ಮುಖ್ಯವಾಗಿ, ಅನುಮತಿ ಪಡೆಯದೇ ನಿರ್ಮಿಸಿರುವ ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸಲು ಸೂಚಿಸಲಾಗಿದೆ.

ಅಧಿಕಾರಿಗಳ ಮೇಲೆ ನಿಗಾ

ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅಧಿಕಾರಿಗಳು ಸಹಕಾರ ನೀಡಿದರೆ ಅಥವಾ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಅವರ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಅಕ್ರಮ ಕಟ್ಟಡದ ಬಗ್ಗೆ ದೂರು ಬಂದ 130 ದಿನಗಳೊಳಗೆ ಅದನ್ನು ತೆರವು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ.

15 ಮೀಟರ್‌ ಎತ್ತರದ ಕಟ್ಟಡಗಳಿಗೆ ನಿಯಮ

ಹೊಸ ಮಾರ್ಗಸೂಚಿಯು 15 ಮೀಟರ್‌ ಎತ್ತರದ ಕಟ್ಟಡಗಳಿಗೆ ಅನ್ವಯವಾಗುತ್ತದೆ.

banner
  • ನಕ್ಷೆ ಅನುಮತಿ ಪಡೆದ 15 ದಿನದೊಳಗೆ ಅಧಿಕಾರಿಗಳ ಸಮ್ಮುಖದಲ್ಲಿ ತಳಪಾಯದ ಗಡಿರೇಖೆಯನ್ನು ಗುರುತು ಮಾಡಬೇಕು.
  • ತಳಪಾಯದ ಗುರುತಿನ ಬಳಿಕ ನೀಡುವ ಪ್ರಮಾಣಪತ್ರವನ್ನು ವಲಯ ಮಟ್ಟದ ಉಪ ನಿರ್ದೇಶಕರು ಕಡ್ಡಾಯವಾಗಿ ದೃಢೀಕರಿಸಬೇಕು.
  • 15 ಮೀಟರ್‌ಗಿಂತ ಎತ್ತರದ ಕಟ್ಟಡಗಳ ನಿರ್ವಹಣೆ ಮತ್ತು ಪರಿಶೀಲನೆಯ ಜವಾಬ್ದಾರಿಯನ್ನು ಜಂಟಿ ನಿರ್ದೇಶಕರಿಗೆ ವಹಿಸಲಾಗಿದೆ.

ನಿಯಮಿತ ತಪಾಸಣೆ ಕಡ್ಡಾಯ

ಕಟ್ಟಡಗಳ ಮೇಲ್ವಿಚಾರಣೆಯನ್ನು ಬಲಪಡಿಸಲು, ನಕ್ಷೆ ಮಂಜೂರಾದ ದಾಖಲೆಗಳನ್ನು ಅಂತರ್ಜಾಲದಲ್ಲಿ ಪ್ರಕಟಿಸಬೇಕು. ನಗರ ಯೋಜನೆಯಲ್ಲಿರುವ ಸಿಬ್ಬಂದಿ ಕಾಲಕಾಲಕ್ಕೆ ತಪಾಸಣೆ ಮಾಡುವುದು ಕಡ್ಡಾಯ. ವರ್ಷಕ್ಕೆ ಆರು ಬಾರಿ ತಪಾಸಣೆಗೆ ತಿಂಗಳುಗಳನ್ನು ನಿಗದಿಪಡಿಸಲಾಗಿದೆ: ಜನವರಿ, ಮಾರ್ಚ್, ಮೇ, ಜುಲೈ, ಸೆಪ್ಟೆಂಬರ್‌ ಮತ್ತು ನವೆಂಬರ್‌ನಲ್ಲಿ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ನಕ್ಷೆ ಪಡೆದ ಮೇಲೆ ಯಾವುದೇ ಉಲ್ಲಂಘನೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?