Home ಜಿಲ್ಲಾ ಸುದ್ದಿಗಳು ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ -ವೆಂಕಟಗಿರಿ ದೇಶಪಾಂಡೆ

ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ -ವೆಂಕಟಗಿರಿ ದೇಶಪಾಂಡೆ

by Laxmikanth Nayak
0 comments

ಹುಣಸಿಗಿ- ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನ ತುಂಬಾ ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷರಾದ ವೆಂಕಟಗಿರಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು ಯಾದಗಿರಿ ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಕಹಳ್ಳಿ ಪ್ರೌಢ ಶಾಲೆಯಲ್ಲಿ ಇಂದು ರಾಷ್ಟ್ರಕವಿ ಕುವೆಂಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪತ್ರಿಕೆಯೊಂದನ್ನು ಲೋಕಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರಕವಿ ಕುವೆಂಪು ಕುರಿತು ಅನುಭಾವಿ ಕವಿ ಲೇಖಕ ಕನಕಪ್ಪ ವಾಗನಗೇರಿ ಅವರು ವಿಶೇಷ ಉಪನ್ಯಾಸ ನೀಡಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಸಿದ್ಧರಾಮ ಹೊನ್ಕಲ್ ಅವರು ಚಕೋರ ಕಾರ್ಯಕ್ರಮದ ಉದ್ದೇಶ ತಿಳಿಸಿ ಕುವೆಂಪು ಬೇಂದ್ರೆ ಮುಂತಾದವರು ನಮ್ಮ ನಾಡಿನ ಹೆಮ್ಮೆಯ ಕವಿಗಳು ಎಂದು ಆಶಯ ನುಡಿಯಲ್ಲಿ ಸ್ಮರಿಸಿದರು.

ಮುಖ್ಯ ಅತಿಥಿಯಾಗಿ ಶ್ರೀ ನಾಗನಗೌಡ ಪಾಟೀಲ ನಿಕಟಪೂರ್ವ ಕಸಾಪ ಗೌರವ ಕಾರ್ಯದರ್ಶಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸಂಗಮ್ಮ ನಾಗಾವಿ ವಹಿಸಿದ್ದರು. ಅವರು ಚಕೋರದ ಮೂಲಕ ತಮ್ಮ ವಿದ್ಯಾರ್ಥಿಗಳಿಗೆ ಸಾಹಿತ್ಯ ಪರಿಚಯ ಮಾಡಿದ್ದು ಸಂತೋಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಮೃತ ಅರಳಗುಂಡಗಿ,ಉಪಾಧ್ಯಕ್ಷರಾದ ಶಿವಾಜಿ ಗುಂತಾ, ನಿವೃತ್ತ ಶಿಕ್ಷಕರಾದ ಬಸವರಾಜ ಕೋಳ್ಕೂರ,ಚಂದ್ರಕಾಂತ ಕುಲಕರ್ಣಿ, ಹಣಮಂತ್ರಾಯ ಗುಂತಾ,ಮಾನಪ್ಪ ಚಿಕ್ಕ ಹೆಬ್ಬಾಳ,ತಿರುಪತಿ ದೊರೆ ಮುಂತಾದ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಸಣ್ಣೆಕ್ಕೆಪ್ಪ ಪೂಜಾರಿ ಸ್ವಾಗತಿಸಿದರು ಹಾಗೂ ಜಾನಪದ ಹಾಗೂ ತತ್ವಪದಕಾರ ಕವಿ ಶ್ರೀ ಸಾಹೇಬಗೌಡ ಬಿರಾದಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸಿ ನಿರ್ವಹಿಸಿದವರು .

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ