Home ಜಿಲ್ಲಾ ಸುದ್ದಿಗಳು ಟೆಂಡರ್ಮುಗಿದರೂರಸ್ತೆಕಾಮಗಾರಿವಿಳಂಬ: ಡಿ. 18ಕ್ಕೆಸುರಪುರದಲ್ಲಿರೈತಸಂಘದಿಂದಪ್ರತಿಭಟನೆ

ಟೆಂಡರ್ಮುಗಿದರೂರಸ್ತೆಕಾಮಗಾರಿವಿಳಂಬ: ಡಿ. 18ಕ್ಕೆಸುರಪುರದಲ್ಲಿರೈತಸಂಘದಿಂದಪ್ರತಿಭಟನೆ

by Laxmikanth Nayak
0 comments

ಟೆಂಡರ್ ಮುಗಿದರೂ ರಸ್ತೆ ಕಾಮಗಾರಿ ವಿಳಂಬ: ಡಿ. 18ಕ್ಕೆ ಸುರಪುರದಲ್ಲಿ ರೈತ ಸಂಘದಿಂದ ಪ್ರತಿಭಟನೆ

ಸುರಪುರ: ತಾಲ್ಲೂಕಿನ ಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಮುಗಿದು ವರ್ಷ ಕಳೆದರೂ ಪ್ರಾರಂಭವಾಗದಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸುರಪುರ-ಹುಣಸಿಗಿ ತಾಲ್ಲೂಕು ಸಮಿತಿ) ವತಿಯಿಂದ ಇದೇ ಡಿಸೆಂಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಿರ್ಲಕ್ಷ್ಯದ ಆರೋಪ: ಸೂಗೂರು ಪಂಚಾಯತಿ ವ್ಯಾಪ್ತಿಯ ಕರ್ನಾಳು-ರುಕ್ಮಾಪೂರ ರಸ್ತೆ, ಚಂದ್ಲಾಪುರದಿಂದ ಪೆಟ್ರೋಲ್ ಪಂಪ್‌ಗೆ ಹೋಗುವ ರಸ್ತೆ, ಬೇವಿನಾಳದಿಂದ ಅಡ್ಡಡಗಿ ಗ್ರಾಮದ ರಸ್ತೆ ಹಾಗೂ ಚೌಡೇಶ್ವರಿಹಾಳದಿಂದ ಸೂಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಈ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲಾಖೆಯು ಟೆಂಡರ್ ಕರೆದು ವರ್ಷ ಕಳೆದಿದೆ. ಆದರೂ ಈವರೆಗೆ ಕಾಮಗಾರಿ ಆರಂಭಿಸದೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ರೈತರ ತಾಳ್ಮೆ ಪರೀಕ್ಷಿಸುತ್ತಿದ್ದಾರೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖಂಡರ ಆಗ್ರಹ: “ರಸ್ತೆಗಳ ಅವ್ಯವಸ್ಥೆಯಿಂದಾಗಿ ರೈತರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಓಡಾಡಲು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಟೆಂಡರ್ ಆಗಿದ್ದರೂ ಕೆಲಸ ತಡೆಯಲು ಕಾರಣವೇನು? ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಏಕೆ ಮೌನವಾಗಿದ್ದಾರೆ?” ಎಂದು ರೈತ ಸಂಘ ಪ್ರಶ್ನಿಸಿದೆ. ಕೂಡಲೇ ಕಾಮಗಾರಿ ಆರಂಭಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದೆ.

banner

ಮನವಿ: ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಂಘಟನೆಯ ಎಲ್ಲಾ ಮುಖಂಡರು, ರೈತ ಬಾಂಧವರು ಹಾಗೂ ಸೂಗೂರು ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಸಮಿತಿ ವಿನಂತಿಸಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ