Home ಜಿಲ್ಲಾ ಸುದ್ದಿಗಳು ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

by Laxmikanth Nayak
0 comments
ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಅಡಿಗಲ್ಲು

ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಅಡಿಗಲ್ಲು

ದೇವತ್ಕಲ್ ಮತಕ್ಷೇತ್ರದಲ್ಲಿ ರೂ.1.25 ಕೋಟಿ‌ ವೆಚ್ಚದ ರಸ್ತೆ–ಸೇತುವೆಕಾಮಗಾರಿ ಆರಂಭ

ಸುರಪುರ ಮತಕ್ಷೇತ್ರದ ದೇವತ್ಕಲ್‌ನಿಂದ ಬಾಚಿಮಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ್ ಅವರು ಭೂಮಿ ಪೂಜೆ ಸಮಾರಂಭ ನೆರವೇರಿಸಿದರು. ಸುಮಾರು ರೂ.1 ಕೋಟಿ 25 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಈ ಯೋಜನೆ ರಸ್ತೆ ಡಾಂಬರೀಕರಣದ ಜೊತೆಗೆ ಉಭಯ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣವನ್ನು ಒಳಗೊಂಡಿದೆ.

ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಯಲ್ಲಿ ಸಂಪರ್ಕ ರಸ್ತೆಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಮಾತನಾಡಿದ ಶಾಸಕವರು, ಅಭಿವೃದ್ಧಿಯ ಮಂತ್ರದೊಂದಿಗೆ ಜನರಿಗೆ ನೀಡಿದ ಮಾತನ್ನು ಈಡೇರಿಸುವುದು ತಮ್ಮ ಮೇಲಿರುವ ಜವಾಬ್ದಾರಿಯಾಗಿದೆ ಎಂದರು. ನಿಕಟಪೂರ್ವ ಶಾಸಕರಾದ ತಮ್ಮ ಪೂಜ್ಯ ತಂದೆಯವರ ಆಶಯದಂತೆ ಜನಸೇವೆ ಮುಂದುವರಿಸಿಕೊಂಡು, ಹಂತ ಹಂತವಾಗಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

banner

ಗುಣಮಟ್ಟದ ಕಾಮಗಾರಿಗಳೇ ಶಾಸಕರೊಬ್ಬರ ಹೆಜ್ಜೆ ಗುರುತುಗಳಾಗಬೇಕು ಎಂಬ ನಿಟ್ಟಿನಲ್ಲಿ ತಾವು ಕೆಲಸ ಮಾಡುತ್ತಿದ್ದು, ಅನುಷ್ಠಾನ ಇಲಾಖೆಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಉಭಯ ಗ್ರಾಮಗಳ ಗ್ರಾಮಸ್ಥರು, ಹಲವು ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ತಮ್ಮ ಗ್ರಾಮಗಳ ಬಹುದಿನದ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಮತ್ತು ಸೇತುವೆ ಕಾಮಗಾರಿ ಆರಂಭಗೊಂಡಿರುವುದಕ್ಕೆ ದೇವತ್ಕಲ್, ಬಾಚಿಮಟ್ಟಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಸಂತಸ ವ್ಯಕ್ತಪಡಿಸಿದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?