Home ಅಂತರಾಷ್ಟ್ರೀಯ ಸುದ್ದಿ ಅಕ್ರಮ ಮರಳು ಗಣಿಗಾರಿಕೆ: ಶರಣಪ್ಪರೆಡ್ಡಿ ದೂರಿನ ಬೆನ್ನಲ್ಲೇ ತನಿಖಾ ತಂಡ ರಚನೆ

ಅಕ್ರಮ ಮರಳು ಗಣಿಗಾರಿಕೆ: ಶರಣಪ್ಪರೆಡ್ಡಿ ದೂರಿನ ಬೆನ್ನಲ್ಲೇ ತನಿಖಾ ತಂಡ ರಚನೆ

by Laxmikanth Nayak
0 comments

ರಾಯಚೂರು/ಸಿಂಧನೂರು: ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟದ ಕುರಿತು ಸಾಮಾಜಿಕ ಹೋರಾಟಗಾರ ಶರಣಪ್ಪರೆಡ್ಡಿ  ಲಖಣಾಪುರ ಅವರು ನೀಡಿದ ದೂರಿಗೆ ತಕ್ಷಣವೇ ಸರ್ಕಾರ ಸ್ಪಂದಿಸಿದೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯು ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.

ಶರಣಪ್ಪರೆಡ್ಡಿ ಲಖಣಾಪುರ ಅವರು ಕಳೆದ ವಾರ, ಅಂದರೆ ಜುಲೈ 23, 2025 ರಂದು, ಮಾನ್ಯ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬೆಂಗಳೂರು ಅವರಿಗೆ ಲಿಖಿತ ದೂರು ಸಲ್ಲಿಸಿದ್ದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಸಳ್ಳಿ ಗ್ರಾಮ ಮತ್ತು ಮಸ್ಕಿ ತಾಲ್ಲೂಕಿನ ಬುದ್ದಿನ್ನಿ ಹಾಗೂ ಜಾಲವಾಡಗಿ ಗ್ರಾಮಗಳ ಪಟ್ಟಾ ಜಮೀನಿನಲ್ಲಿ ಮಂಜೂರಾಗಿರುವ ಮರಳು ಗುತ್ತಿಗೆ ಪ್ರದೇಶಗಳಲ್ಲಿ ಸಕ್ರಮದ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಮಿತಿಮೀರಿದ ಸಾಗಾಣಿಕೆ ನಡೆಯುತ್ತಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಈ ದೂರಿನ ಗಂಭೀರತೆಯನ್ನು ಅರಿತ ಸರ್ಕಾರ, ಹೆಚ್ಚುವರಿ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉತ್ತರ ವಲಯ ಇವರ ಆದೇಶದ ಮೇರೆಗೆ ತಕ್ಷಣವೇ ಕ್ರಮ ಕೈಗೊಂಡಿದೆ. ಅದರಂತೆ, ಜುಲೈ 30, 2025 ರಂದು, ಬಳ್ಳಾರಿ ವಲಯದ ಹೆಚ್ಚುವರಿ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅವರು ತನಿಖಾ ತಂಡವನ್ನು ರಚಿಸಿದ್ದಾರೆ. ಈ ತಂಡವು ಬಳ್ಳಾರಿ ಕಚೇರಿಯ ಅನುಭವಿ ಸಿಬ್ಬಂದಿಗಳನ್ನು ಒಳಗೊಂಡಿದ್ದು, ದೂರಿನಲ್ಲಿ ಉಲ್ಲೇಖಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ, ಜಂಟಿ ಸ್ಥಳ ಪರಿಶೀಲನೆ ಮತ್ತು ಸಮಗ್ರ ತನಿಖೆ ನಡೆಸಲಿದೆ ಎಂದು ಶರಣಪ್ಪರೆಡ್ಡಿ ಲಖಣಾಪುರ ಅವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದ್ದ ಅಕ್ರಮ ಮರಳು ಗಣಿಗಾರಿಕೆಯ ವಿರುದ್ಧದ ಹೋರಾಟಕ್ಕೆ ಸರ್ಕಾರ ಸ್ಪಂದಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ತನಿಖಾ ತಂಡದ ವರದಿ ಮತ್ತು ನಂತರದ ಕ್ರಮಗಳ ಕುರಿತು ಕಾದು ನೋಡಬೇಕಿದೆ.

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ