Home ರಾಜಕೀಯ ಕೃಷ್ಣಾ ಮೇಲ್ದಂಡೆ ಯೋಜನೆ: ನೀರಾವರಿಗೆ ಸರ್ಕಾರ ಬದ್ಧ, ಆದರೆ ವೆಚ್ಚ ದುಪ್ಪಟ್ಟು

ಕೃಷ್ಣಾ ಮೇಲ್ದಂಡೆ ಯೋಜನೆ: ನೀರಾವರಿಗೆ ಸರ್ಕಾರ ಬದ್ಧ, ಆದರೆ ವೆಚ್ಚ ದುಪ್ಪಟ್ಟು

by Laxmikanth Nayak
0 comments

ಕೃಷ್ಣಾ ಮೇಲ್ದಂಡೆ ಯೋಜನೆ: ನೀರಾವರಿಗೆ ಸರ್ಕಾರ ಬದ್ಧ, ಆದರೆ ವೆಚ್ಚ ದುಪ್ಪಟ್ಟು


ವಿಶೇಷ ವರದಿ, ಜನ ಆಕ್ರೋಶ


ಬೆಂಗಳೂರು: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-3 ಅನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದ್ದು, ರೈತರಿಗೆ ನ್ಯಾಯಯುತ ಪರಿಹಾರ ಮತ್ತು ಪುನರ್ವಸತಿ ಒದಗಿಸಲು ಬದ್ಧವಾಗಿದೆ ಎಂದು ತಿಳಿಸಿದೆ. ಆದರೆ, ಯೋಜನೆಯ ಆರಂಭಿಕ ಅಂದಾಜು ವೆಚ್ಚವು ಈಗ ಎರಡು ಪಟ್ಟು ಹೆಚ್ಚಳವಾಗಿರುವುದು ಆರ್ಥಿಕ ಹೊರೆಯ ಚಿಂತೆಯನ್ನು ಹುಟ್ಟುಹಾಕಿದೆ.


ಇಂದು ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು ಯೋಜನೆ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಹಂಚಿಕೆಯಾದ 130 ಟಿಎಂಸಿ ನೀರನ್ನು ಬಳಸಿಕೊಂಡು 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು 519 ಮೀಟರ್‌ಗಳಿಂದ 524 ಮೀಟರ್‌ಗಳಿಗೆ ಏರಿಸಲಾಗುವುದು.
ಭೂಸ್ವಾಧೀನ ಪ್ರಕ್ರಿಯೆ ಚುರುಕು
ಯೋಜನೆಗೆ ಒಟ್ಟು 1,33,867 ಎಕರೆ ಜಮೀನು ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಜಮೀನು ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ. ಈವರೆಗೂ ಕೇವಲ 29,566 ಎಕರೆಗೆ ಮಾತ್ರ ಐತೀರ್ಪು ಹೊರಡಿಸಲಾಗಿದ್ದು, ಇನ್ನೂ 59,354 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ. ಈ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡುವ ಬದಲು, ಒಂದೇ ಹಂತದಲ್ಲಿ ಪೂರ್ಣಗೊಳಿಸಲು ಸರ್ಕಾರ ತೀರ್ಮಾನಿಸಿದೆ.

banner


ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತ ಪರಿಹಾರ ಮತ್ತು ಸೂಕ್ತ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.


ವೆಚ್ಚದ ಭಾರೀ ಹೆಚ್ಚಳ: ₹51,000 ಕೋಟಿಯಿಂದ ₹87,000 ಕೋಟಿಗೆ


ಯೋಜನೆಯ ಕುರಿತು ಪ್ರಮುಖವಾಗಿ ಗಮನ ಸೆಳೆದ ಅಂಶವೆಂದರೆ ಅದರ ಪರಿಷ್ಕೃತ ವೆಚ್ಚ. ಆರಂಭದಲ್ಲಿ ರೂ. 51,148 ಕೋಟಿ ಎಂದು ಅಂದಾಜಿಸಲಾಗಿದ್ದ ಯೋಜನಾ ಮೊತ್ತ ಈಗ ಬರೋಬ್ಬರಿ ರೂ. 87,818 ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ ಕೇವಲ ಭೂಸ್ವಾಧೀನ ಪ್ರಕ್ರಿಯೆಗೆಂದೇ ಆರಂಭಿಕ ಅಂದಾಜಾಗಿದ್ದ ರೂ. 17,627 ಕೋಟಿ ಈಗ ರೂ. 40,557.09 ಕೋಟಿಗೆ ಹೆಚ್ಚಿದೆ. ಯೋಜನೆಗೆ ಸಂಬಂಧಿಸಿದ 9 ಉಪ ಯೋಜನೆಗಳ ಸಿವಿಲ್ ಕಾಮಗಾರಿಗಳ ವೆಚ್ಚವೂ ರೂ. 25,122.53 ಕೋಟಿ ಎಂದು ಪರಿಷ್ಕೃತ ಅಂದಾಜಿಸಲಾಗಿದೆ.


ರೈತರ ಹಿತಾಸಕ್ತಿ ಹಾಗೂ ನಮ್ಮ ಪಾಲಿನ ನೀರಿನ ಸದ್ಬಳಕೆಗಾಗಿ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದ್ದಾರೆ. ಆದರೆ, ವೆಚ್ಚದ ಭಾರೀ ಹೆಚ್ಚಳವು ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆ ಹೇರಲಿದ್ದು, ಇದನ್ನು ಹೇಗೆ ನಿಭಾಯಿಸಲಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ